alex Certify BIG NEWS: ಅಮಾನತುಗೊಂಡಿರುವ ಅಧಿಕಾರಿಗಳಿಂದಲೇ ವಿಕ್ರಂ ಸಿಂಹ ವಿಚಾರಣೆ; ಅನುಮಾನಕ್ಕೆ ಕಾರಣವಾದ ಅರಣ್ಯ ಇಲಾಖೆ ನಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಮಾನತುಗೊಂಡಿರುವ ಅಧಿಕಾರಿಗಳಿಂದಲೇ ವಿಕ್ರಂ ಸಿಂಹ ವಿಚಾರಣೆ; ಅನುಮಾನಕ್ಕೆ ಕಾರಣವಾದ ಅರಣ್ಯ ಇಲಾಖೆ ನಡೆ

ಹಾಸನ: ಮರಗಳ ಮಾರಣಹೋಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಂ ಸಿಂಹ ಅವರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಕೇಸ್ ನಲ್ಲಿ ಅಮಾನತುಗೊಂಡಿರುವ ಅಧಿಕಾರಿಗಳಿಂದಲೇ ವಿಕ್ರಂ ಸಿಂಹ್ ಅವರ ವಿಚಾರಣೆ ನಡೆಯುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಅಕ್ರಮವಾಗಿ ಮರಗಳನ್ನು ಕಡಿದ ಪ್ರಕರಣ ಸಂಬಂಧ ನಿರ್ಲಕ್ಷ್ಯ ಆರೋಪದಲ್ಲಿ ಅಮಾನತುಗೊಂಡಿದ್ದ ಎಸಿ ಎಫ್ ಪ್ರಭುಗೌಡ ಬಿರಾದಾರ್ ಹಾಗೂ ಆರ್ ಎಫ್ ಒ ವಿನಯ್ ಕುಮಾರ್ ನೇತೃತ್ವದ ತಂಡದಿಂದಲೇ ವಿಕ್ರಂ ಸಿಂಹ ವಿಚಾರಣೆ ನಡೆಯುತ್ತಿದೆ.

ಅಮಾನತುಗೊಂಡಿದ್ದ ಅಧಿಕಾರಿಗಳಿಂದಲೇ ಅದೇ ಪ್ರಕರಣದ ಆರೋಪಿಯ ತನಿಖೆ ನಡೆಸುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಹಾಸನದ ಗೆಂಡೆಕಟ್ಟೆ ಅರಣ್ಯ ಪ್ರದೇಶದಲ್ಲಿ ಆರೋಪಿ ವಿಚಾರಣೆ ನಡೆಸಲಾಗುತ್ತಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Nezabudnuteľná zmrzlinová výzva: len niektorí nájdu 3 prázdne Vyhľadávanie ihly v kopy sena: Nájdi myš za 8 sekúnd: hádanka pre