alex Certify BIG NEWS: ಹೊಸ ವಿವಾದ ಸೃಷ್ಟಿಸಿದ ಮಸೀದಿ ಮಾದರಿಯ ಬಸ್ ನಿಲ್ದಾಣ; ಬೆಳಗಾಗುವಷ್ಟರಲ್ಲಿ ಗುಂಬಜ್ ಗಳ ಮೇಲೆ ಕಳಸ ನಿರ್ಮಾಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹೊಸ ವಿವಾದ ಸೃಷ್ಟಿಸಿದ ಮಸೀದಿ ಮಾದರಿಯ ಬಸ್ ನಿಲ್ದಾಣ; ಬೆಳಗಾಗುವಷ್ಟರಲ್ಲಿ ಗುಂಬಜ್ ಗಳ ಮೇಲೆ ಕಳಸ ನಿರ್ಮಾಣ

ಮೈಸೂರು: ರಾಜ್ಯದಲ್ಲಿ ಹಿಜಾಬ್, ಕೇಸರಿ ಶಾಲು, ಟಿಪ್ಪು ಪ್ರತಿಮೆ, ಶಾಲೆಗಳಿಗೆ ಕೇಸರಿ ಬಣ್ಣ ವಿವಾದದ ಬೆನ್ನಲ್ಲೇ ಇದೀಗ ಮಸೀದಿ ಮಾದರಿಯ ಬಸ್ ಶೆಲ್ಟರ್ ಗಳು ಹೊಸದೊಂದು ವಿವಾದವನ್ನು ಹುಟ್ಟು ಹಾಕಿವೆ.

ಮೈಸೂರಿನ ಹಲವೆಡೆಗಳಲ್ಲಿ ಮಸೀದಿ ಮಾದರಿಯ ಬಸ್ ನಿಲ್ದಾಣಗಳು ನಿರ್ಮಾಣಗೊಂಡಿದ್ದು, ತೀವ್ರ ವಿರೋಧಕ್ಕೆ ಕಾರಣವಾಗಿದೆ. ಮೈಸೂರಿನ ನಂಜನಗೂಡು ರಸ್ತೆಯಲ್ಲಿ ಹಲವೆಡೆಗಳಲ್ಲಿ ಮಸೀದಿ ಮಾದರಿಯ ಬಸ್ ನಿಲ್ದಾಣಗಳನ್ನು ನಿರ್ಮಿಸಲಾಗಿದ್ದು, ಸಂಸದ ಪ್ರತಾಪ್ ಸಿಂಹ ಈ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಟಿಪ್ಪು ಪ್ರತಿಮೆ ನಿರ್ಮಾಣ ವಿಚಾರಗಳ ಬೆನ್ನಲ್ಲೇ ಈಗ ಇಂಥದ್ದೊಂದು ಬೆಳವಣಿಗೆಗಳು ನಡೆಯುತ್ತಿರುವುದು ಸರಿಯಲ್ಲ ಎಂದು ಕಿಡಿಕಾರಿದ್ದಾರೆ.

ಇನ್ನು ಈ ಮಸೀದಿ ಮಾದರಿಯ ಬಸ್ ನಿಲ್ದಾಣಗಳ ಗುಂಬಜ್ ಮೇಲೆ ಈಗ ರಾತ್ರಿ ಬೆಳಗಾಗುವಷ್ಟರಲ್ಲಿ ಕಳಶ ನಿರ್ಮಾಣ ಮಾಡಲಾಗಿದೆ. ಬಸ್ ನಿಲ್ದಾಣದ ಮೂರು ಗುಂಬಜ್ ಗಳ ಮೇಲೆ ಕಳಸ ನಿರ್ಮಿಸುವ ಮೂಲಕ ವಿವಾದಕ್ಕೆ ತೇಪೆ ಹಚ್ಚುವ ಕೆಲಸ ಮಾಡಲಾಗುತ್ತಿದೆ ಎಂದು ಸಾರ್ವಜನಿಕರು ಗರಂ ಆಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...