alex Certify ಶಿವಮೊಗ್ಗ: ಸಕಾಲಕ್ಕೆ ಸಿಗದ ಆಂಬುಲೆನ್ಸ್, ಮಾರ್ಗಮಧ್ಯದಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗ: ಸಕಾಲಕ್ಕೆ ಸಿಗದ ಆಂಬುಲೆನ್ಸ್, ಮಾರ್ಗಮಧ್ಯದಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ಶಿವಮೊಗ್ಗ: ಸಕಾಲಕ್ಕೆ ಅಂಬುಲೆನ್ಸ್ ಸಿಗದೆ ಗರ್ಭಿಣಿಯೊಬ್ಬರು ಆಸ್ಪತ್ರೆಗೆ ತೆರಳುವ ಮಾರ್ಗ ಮಧ್ಯದಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆ ಸಾಗರ ತಾಲ್ಲೂಕಿನ ತುಮರಿ ಸಮೀಪ ನಡೆದಿದೆ.

ಹೊಸಮನೆ ಗ್ರಾಮದ ಚೈತ್ರಾ(26) ತುಂಬು ಗರ್ಭಿಣಿಯಾಗಿದ್ದು, ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ಮನೆಯವರು 108 ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ತೆರಳಲು ಹೊರಟಿದ್ದಾರೆ. ಆದರೆ, ಆಂಬುಲೆನ್ಸ್ ಬಾರದ ಕಾರಣ ಸಕಾಲಕ್ಕೆ ಆಸ್ಪತ್ರೆಗೆ ಹೋಗಲು ಸಾಧ್ಯವಾಗಿಲ್ಲ. ಕೊನೆಗೆ ಖಾಸಗಿ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯದಲ್ಲೇ ಚೈತ್ರಾ ಮಗುವಿಗೆ ಜನ್ಮ ನೀಡಿದ್ದಾರೆ.

ಮೊದಲಿಗೆ ಬ್ಯಾಕೋಡು ಆಸ್ಪತ್ರೆಯಲ್ಲಿ ಸೌಲಭ್ಯಗಳಿಲ್ಲದ ಕಾರಣಕ್ಕೆ ಬೇರೆ ಆಸ್ಪತ್ರೆಗೆ ಕರೆದೊಯ್ಯಲು ಸೂಚಿಸಲಾಗಿದೆ. ಸ್ಥಳೀಯರು ಶಾಸಕ ಹರತಾಳು ಹಾಲಪ್ಪ ಅವರಿಗೆ ಮಾಹಿತಿ ನೀಡಿದ್ದು, ಅವರು ಅಗತ್ಯ ಕ್ರಮ ಕೈಗೊಳ್ಳಲು ವೈದ್ಯರಿಗೆ ಸೂಚಿಸಿದ್ದಾರೆ. ತಾಯಿ, ಮಗು ಆರೋಗ್ಯವಾಗಿದ್ದು, ಇಬ್ಬರನ್ನು ತುಮರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...