alex Certify ಗ್ರಾಹಕರಿಗೆ ಗುಡ್ ನ್ಯೂಸ್: ಈರುಳ್ಳಿ ದರ ಇಳಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರಾಹಕರಿಗೆ ಗುಡ್ ನ್ಯೂಸ್: ಈರುಳ್ಳಿ ದರ ಇಳಿಕೆ

ಬೆಂಗಳೂರು: ಮಳೆಯಿಂದಾಗಿ ಏರುಗತಿಯಲ್ಲಿ ಸಾಗಿದ್ದ ಈರುಳ್ಳಿ ದರ ಸಗಟು ಮಾರುಕಟ್ಟೆಯಲ್ಲಿ ನಿಯಂತ್ರಣಕ್ಕೆ ಬಂದಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಗರಿಷ್ಠ ಕೆಜಿಗೆ 45 ರೂ. ನಂತೆ ಮಾರಾಟವಾಗುತ್ತಿದೆ.

ಟೊಮೆಟೊ ದರ ಏರಿಕೆಯಾಗಿದ್ದು, ಇದರೊಂದಿಗೆ ಈರುಳ್ಳಿ ದರ ಕೂಡ ಏರಿಕೆ ಹಾದಿಯಲ್ಲಿತ್ತು. ಎರಡು ದಿನಗಳಿಂದ ಈರುಳ್ಳಿ ದರ ಕಡಿಮೆಯಾಗಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಒಂದೆರಡು ದಿನಗಳಲ್ಲಿ ದರ ಇಳಿಕೆಯಾಗುವ ಸಾಧ್ಯತೆ ಇದೆ.

ಕಳೆದ ವಾರ ಸಗಟು ಮಾರುಕಟ್ಟೆಯಲ್ಲಿ ಈರುಳ್ಳಿ ಕ್ವಿಂಟಲ್ ಗೆ 3600 – 3800 ರೂ. ವರೆಗೆ ತಲುಪಿತ್ತು. ಸೋಮವಾರ 3200 -3400 ರೂ.ಗೆ ವ್ಯಾಪಾರವಾಗಿದ್ದು, ಉಳಿದಂತೆ ಕ್ವಿಂಟಲ್ ಗೆ ಕನಿಷ್ಠ 1,500 ರೂ. ನಿಂದ ಗರಿಷ್ಠ 3200 ರೂ. ವರೆಗೆ ಮಾರಾಟವಾಗಿದೆ.

ಯಶವಂತಪುರ, ದಾಸನಪುರ ಮಾರುಕಟ್ಟೆಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿ ಬಂದಿದೆ. ಹೀಗಾಗಿ ದರ ಒಂದೆರಡು ದಿನಗಳಲ್ಲಿ ಚಿಲ್ಲರೆ ಮಾರುಕಟ್ಟೆಯಲ್ಲಿಯೂ ಕಡಿಮೆಯಾಗಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...