alex Certify ಟಿ.ಸಿ. ಕೊಡಲು ಲಂಚ ಪಡೆಯುತ್ತಿದ್ದ ಪ್ರಾಂಶುಪಾಲ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟಿ.ಸಿ. ಕೊಡಲು ಲಂಚ ಪಡೆಯುತ್ತಿದ್ದ ಪ್ರಾಂಶುಪಾಲ ಅರೆಸ್ಟ್

ಬೆಂಗಳೂರು: ವಿದ್ಯಾರ್ಥಿಗೆ ಟಿಸಿ ಕೊಡಲು ಲಂಚ ಪಡೆಯುತ್ತಿದ್ದ ಪ್ರಾಂಶುಪಾಲನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ರಾಜಾಜಿನಗರದ ಎರಡನೇ ಬ್ಲಾಕ್ ಬಸವೇಶ್ವರ ಪ್ರೌಢಶಾಲೆಯ ಪ್ರಾಂಶುಪಾಲ ವಿ. ನಾರಾಯಣ ವಿದ್ಯಾರ್ಥಿಗೆ ವರ್ಗಾವಣೆ ಪತ್ರ ನೀಡಲು 5,000 ರೂ. ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ವಿದ್ಯಾರ್ಥಿಯ ಫಲಿತಾಂಶವನ್ನು ತಡೆಹಿಡಿದು ಹಣಕ್ಕೆ ಬೇಡಿಕೆ ಇಡಲಾಗಿತ್ತು. ಈ ಕುರಿತು ವಿದ್ಯಾರ್ಥಿಯ ತಾಯಿ ದೂರು ನೀಡಿದ್ದರು.

ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿಯನ್ನು ಮುಂದಿನ ತರಗತಿಗೆ ತೇರ್ಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಡಲಾಗಿತ್ತು. ಬುಧವಾರ 5,000 ರೂ. ಲಂಚ ಪಡೆಯುವಾಗ ಪೋಷಕರ ಎದುರಲ್ಲೇ ಪ್ರಾಂಶುಪಾಲ ನಾರಾಯಣ ಅವರನ್ನು ಬಂಧಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...