alex Certify ಸನ್ನಡತೆ ಆಧಾರದ ಮೇಲೆ 81 ಕೈದಿಗಳಿಗೆ ಬಿಡುಗಡೆ ಭಾಗ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸನ್ನಡತೆ ಆಧಾರದ ಮೇಲೆ 81 ಕೈದಿಗಳಿಗೆ ಬಿಡುಗಡೆ ಭಾಗ್ಯ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಿಂದ 81 ಕೈದಿಗಳಿಗೆ ಬಿಡುಗಡೆ ಭಾಗ್ಯ ಸಿಕ್ಕಿದೆ. ಸನ್ನಡತೆ ಆಧಾರದ ಮೇಲೆ ಸರ್ಕಾರ 81 ಕೈದಿಗಳನ್ನು ಜೈಲಿನಿಂದ ಬಿಡುಗಡೆ ಮಾಡಿದೆ.

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 81 ಕೈದಿಗಳು ಜೈಲಿನಿಂದ ಬಿಡುಗಡೆ ಆಗಿದ್ದಾರೆ. 214 ಕೈದಿಗಳ ಬಿಡುಗಡೆಗೆ ರಾಜ್ಯ ಸರ್ಕಾರ ಆದೇಶ ಮಾಡಿದ್ದು, ನಿನ್ನೆ ಇಬ್ಬರು ಮಹಿಳಾ ಕೈದಿಗಳು ಸೇರಿದಂತೆ 81 ಕೈದಿಗಳ ಬಿಡುಗಡೆ ಮಾಡಲಾಗಿದೆ.

ಬಿಡುಗಡೆ ಪ್ರಮಾಣ ಪತ್ರ ನೀಡಿ ಜೈಲು ಅಧಿಕಾರಿಗಳು ಕಳುಹಿಸಿದ್ದಾರೆ. ಒಟ್ಟು 214 ಕೈದಿಗಳ ಬಿಡುಗಡೆಗೆ ಸ್ಥಾಯಿ ಸಮಿತಿ ಪ್ರಸ್ತಾವನೆ ಸಲ್ಲಿಸಿತ್ತು. ಅಪರಾಧ ಕೃತ್ಯದಲ್ಲಿ ಭಾಗಿಯಾಗುವುದಿಲ್ಲ ಎಂದು ಕೈದಿಗಳು ಬರೆದು ಕೊಟ್ಟಿದ್ದರು. ಬಿಜೆಪಿ ಸರ್ಕಾರ ಇದ್ದಾಗ ಬಿಡುಗಡೆ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಮೇ 22 ರಂದು ರಾಜ್ಯಪಾಲರ ಅಂಕಿತದ ನಂತರ ಕೈದಿಗಳ ಬಿಡುಗಡೆ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...