alex Certify ಒಬಿಸಿ ಮೀಸಲಾತಿಯಿಂದ ಮುಸ್ಲಿಮರನ್ನು ಕೈ ಬಿಡಲು ಹುನ್ನಾರ: ಪ್ರಿಯಾಂಕ್ ಖರ್ಗೆ ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಬಿಸಿ ಮೀಸಲಾತಿಯಿಂದ ಮುಸ್ಲಿಮರನ್ನು ಕೈ ಬಿಡಲು ಹುನ್ನಾರ: ಪ್ರಿಯಾಂಕ್ ಖರ್ಗೆ ಆರೋಪ

ಚಿತ್ರದುರ್ಗ: ಒಬಿಸಿ ಮೀಸಲಾತಿಯಿಂದ ಮುಸ್ಲಿಂ ಸಮುದಾಯವನ್ನು ಕೈಬಿಡಲು ಬಿಜೆಪಿ ಹುನ್ನಾರ ನಡೆಸಿದೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ.

ಚಿತ್ರದುರ್ಗ ಜಿಲ್ಲೆ ಹಿರಿಯೂರಿನಲ್ಲಿ ಮಾತನಾಡಿದ ಅವರು, ಯಾವ ಸಮಾಜಕ್ಕೆ ಎಷ್ಟು ಮೀಸಲಾತಿ ನೀಡಬೇಕೆಂಬ ಚರ್ಚೆ ನಡೆದಿದೆ. ಈ ಸಮಾಜಕ್ಕೆ ಮೀಸಲಾತಿ ಕೊಡಿ ಎನ್ನುವ ಶಾಸಕರಿಗೆ ಸಂವಿಧಾನದ ಬಗ್ಗೆ ಅರಿವಿಲ್ಲ. ಮುಸ್ಲಿಮರು, ದಲಿತರನ್ನು ಬಿಜೆಪಿ ಟಾರ್ಗೆಟ್ ಮಾಡುತ್ತಿದೆ. ಬಿಜೆಪಿ ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರ ವಿರೋಧಿ ಎಂದು ಆರೋಪಿಸಿದ್ದಾರೆ.

ಬಿಜೆಪಿ ಸೇರಿದ ನಂತರ ಕಾಂಗ್ರೆಸ್ ಪಕ್ಷವನ್ನು ಟೀಕಿಸುವ ಸಚಿವ ಸುಧಾಕರ್ ಎರಡು ಸಲ ಯಾವ ಸಿದ್ಧಾಂತದ ಮೇಲೆ ಶಾಸಕರಾಗಿದ್ದರು ಎಂದು ಖರ್ಗೆ ಪ್ರಶ್ನಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...