alex Certify ಬಿಜೆಪಿಯಲ್ಲಿ ಯಡಿಯೂರಪ್ಪ ಬಿಟ್ಟರೆ ಮತ್ಯಾರೂ ಯೋಗ್ಯರಲ್ಲ ಎಂದ ಪ್ರಿಯಾಂಕ್​ ಖರ್ಗೆ….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿಯಲ್ಲಿ ಯಡಿಯೂರಪ್ಪ ಬಿಟ್ಟರೆ ಮತ್ಯಾರೂ ಯೋಗ್ಯರಲ್ಲ ಎಂದ ಪ್ರಿಯಾಂಕ್​ ಖರ್ಗೆ….!

ಕಾಂಗ್ರೆಸ್​ನಲ್ಲಿ ಸಿಎಂ ಅಭ್ಯರ್ಥಿ ಚರ್ಚೆ ವಿಚಾರವಾಗಿ ಬಿಜೆಪಿ ನಾಯಕರು ನೀಡಿದ ಹೇಳಿಕೆಗಳಿಗೆ ಕೆಪಿಸಿಸಿ ವಕ್ತಾರ ಪ್ರಿಯಾಂಕ್​ ಖರ್ಗೆ ಭರ್ಜರಿ ಟಾಂಗ್​ ನೀಡಿದ್ದಾರೆ. ಕಲಬುರಗಿಯಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಮುಂದಿನ ಸಿಎಂ ಯಾರು ಎಂಬ ಚರ್ಚೆಯೇ ಈ ಸಂದರ್ಭದಲ್ಲಿ ಅಪ್ರಸ್ತುತವಾಗಿದೆ. ಕೊರೊನಾ ಸಂದರ್ಭದಲ್ಲಿ ಜನರಿಗೆ ನೆರವಾಗುವ ಬಗ್ಗೆ ಮಾತ್ರ ನಮ್ಮ ಯೋಚನೆ ಇರಬೇಕು ಎಂದು ಹೇಳಿದ್ರು.

ಚುನಾವಣೆಯಲ್ಲಿ ಕಾಂಗ್ರೆಸ್​ ಬಹುಮತ ಸಂಪಾದಿಸಿದ ಬಳಿಕ ಹೈಕಮಾಂಡ್​ ಸಿಎಂ ಯಾರೆಂದು ಆಯ್ಕೆ ಮಾಡುತ್ತದೆ. ಬಿಜೆಪಿ ಮನೆಯೊಂದು ಮೂರು ಬಾಗಿಲಲ್ಲ. ನೂರು ಬಾಗಿಲಾಗಿದೆ. ನಮ್ಮಲ್ಲಿ ಸಿಎಂ ಸ್ಥಾನಕ್ಕೆ ಅರ್ಹರಾದವರು ತುಂಬಾ ಜನ ಇದ್ದಾರೆ. ಅದಕ್ಕೆ ಈ ರೀತಿ ಚರ್ಚೆ ನಡೆಯುತ್ತೆ. ಆದರೆ ಬಿಜೆಪಿಯಲ್ಲಿ ಯಡಿಯೂರಪ್ಪ ಬಿಟ್ಟರೆ ಇನ್ಯಾರೂ ಇಲ್ಲ. ಮೊದಲು ನಿಮ್ಮ ಮನೆಯ ಸಮಸ್ಯೆ ಸರಿ ಮಾಡಿಕೊಳ್ಳಿ ಎಂದು ಪರೋಕ್ಷವಾಗಿ ಬಿಜೆಪಿ ನಾಯಕರ ಕಿವಿ ಹಿಂಡಿದ್ರು.

ಜಮೀರ್​ ಅವರ ವೈಯಕ್ತಿಕ ಅಭಿಪ್ರಾಯಗಳನ್ನ ಹೊರಹಾಕಿದ್ದಾರೆ. ಆದರೆ ಪಕ್ಷ ಕಟ್ಟುವ ಸಾಮರ್ಥ್ಯ ಹಾಗೂ ಜವಾಬ್ದಾರಿ ಹೊಂದಿರುವ ನಾಯಕ ಈ ರೀತಿ ಮಾತನಾಡೋದಿಲ್ಲ ಎಂದು ಹೇಳುವ ಮೂಲಕ ಜಮೀರ್​ಗೂ ಟಾಂಗ್​ ನೀಡಿದ್ರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...