alex Certify ಕೋತಿ ಸೋಮನ ಬಗ್ಗೆ ಸುಳಿವು ನೀಡಿದವರಿಗೆ 50 ಸಾವಿರ ರೂ. ಬಹುಮಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೋತಿ ಸೋಮನ ಬಗ್ಗೆ ಸುಳಿವು ನೀಡಿದವರಿಗೆ 50 ಸಾವಿರ ರೂ. ಬಹುಮಾನ

ಮೈಸೂರು: ಪೆರೋಲ್ ಮೇಲೆ ಹೊರ ಬಂದಿದ್ದ ಕೈದಿ ತಲೆಮರಿಸಿಕೊಂಡ ಹಿನ್ನೆಲೆಯಲ್ಲಿ ಅಪರಾಧಿ ಪತ್ತೆಗೆ ಕಮಿಷನರ್ 50,000 ರೂ. ನಗದು ಬಹುಮಾನ ಘೋಷಿಸಿದ್ದಾರೆ.

ಮೈಸೂರು ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಅವರು ಬಹುಮಾನ ಘೋಷಿಸಿದ್ದಾರೆ. ಸೋಮ ಅಲಿಯಾಸ್ ಕೋತಿ ಸೋಮ ಪರಾರಿಯಾಗಿರುವ ಅಪರಾಧಿಯಾಗಿದ್ದಾನೆ. ಕೊಲೆ ಪ್ರಕರಣದಲ್ಲಿ ಮಂಡ್ಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿತ್ತು. ಮೈಸೂರು ಕೇಂದ್ರ ಕಾರಾಗೃಹದಲ್ಲಿ ಸಜಾಬಂಧಿಯಾಗಿದ್ದ ಸೋಮ 30 ದಿನಗಳ ಪೆರೋಲ್ ರಜೆ ಮೇಲೆ ಜೈಲಿನಿಂದ ಹೊರಬಂದಿದ್ದು, ತಲೆಮರೆಸಿಕೊಂಡಿದ್ದಾನೆ.

ಕಾರಾಗೃಹಕ್ಕೆ ಶರಣಾಗದೆ ಸೋಮ ತಲೆಮರೆಸಿಕೊಂಡಿದ್ದಾನೆ. ಮೈಸೂರು ನಗರದ ನಜರಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಪರಾಧಿ ಸೋಮನ ಪತ್ತೆಗೆ ಸುಳಿವು ನೀಡಿದವರಿಗೆ ಪೊಲೀಸ್ ಕಮಿಷನರ್ 50 ಸಾವಿರ ರೂಪಾಯಿ ನಗದು ಬಹುಮಾನ ಘೋಷಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...