alex Certify ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕಕ್ಕೆ ಗುಡ್ ನ್ಯೂಸ್: 5701 ಕೋಟಿ ರೂ. ನೀರಾವರಿ ಯೋಜನೆಗೆ ಅನುಮೋದನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕಕ್ಕೆ ಗುಡ್ ನ್ಯೂಸ್: 5701 ಕೋಟಿ ರೂ. ನೀರಾವರಿ ಯೋಜನೆಗೆ ಅನುಮೋದನೆ

ಬೆಳಗಾವಿ: 5701.38 ಕೋಟಿ ರೂಪಾಯಿ ವೆಚ್ಚದ ನೀರಾವರಿ ಯೋಜನೆಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ನೀರಾವರಿ ಯೋಜನೆಗಳಿಗಾಗಿ ಒಪ್ಪಿಗೆ ನೀಡಲಾಗಿದೆ. ಒಟ್ಟು 13 ನೀರಾವರಿ ಯೋಜನೆಗಳಿಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಮೆಳ್ಳಿಗೆರೆ -ಹಲಗಲಿ ಏತ ನೀರಾವರಿ, ಅಮ್ಮಾಜೇಶ್ವರಿ ಏತ ನೀರಾವರಿ ಯೋಜನೆ, ಅರಭಾವಿ ಕ್ಷೇತ್ರ ವ್ಯಾಪ್ತಿಯ 20 ಕೆರೆಗಳ ನೀರು ತುಂಬುವ ಯೋಜನೆ, ಮಹಾಲಕ್ಷ್ಮಿ ಯೋಜನೆ, ಶ್ರೀ ಸತ್ತಿಗೇರಿ ಹಾಗೂ ಮೆಹಾಕರ್ ಏತ ನೀರಾವರಿ ಯೋಜನೆಗಳು, ಔರಾದ ತಾಲೂಕಿನ 36 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗಳು ಸೇರಿದಂತೆ 13 ನೀರಾವರಿ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...