alex Certify ರಾಜ್ಯದ ಜನತೆಗೆ ಗುಡ್ ನ್ಯೂಸ್: ಆಸ್ತಿ ವಿವರ ಸಂಪೂರ್ಣ ಡಿಜಿಟಲೀಕರಣ; ಡ್ರೋನ್ ಸರ್ವೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಜನತೆಗೆ ಗುಡ್ ನ್ಯೂಸ್: ಆಸ್ತಿ ವಿವರ ಸಂಪೂರ್ಣ ಡಿಜಿಟಲೀಕರಣ; ಡ್ರೋನ್ ಸರ್ವೆ

ಬೆಂಗಳೂರು: ರಾಜ್ಯಾದ್ಯಂತ ಡ್ರೋನ್ ಮೂಲಕ ಭೂಮಿ ಸರ್ವೆ ಕಾರ್ಯ ಪೂರ್ಣಗೊಳಿಸಿ ಆಸ್ತಿ ವಿವರಗಳನ್ನು ಸಂಪೂರ್ಣ ಡಿಜಿಟಲ್ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದ್ದಾರೆ.

ವಿಕಾಸ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ವರ್ಷದಲ್ಲಿ ಡ್ರೋನ್ ಮೂಲಕ ಸರ್ವ ಕಾರ್ಯ ಪೂರ್ಣಗೊಳಿಸಲಿದ್ದು, ಆಸ್ತಿ ವಿವರ ಸಂಪೂರ್ಣ ಡಿಜಿಟಲೀಕರಣ ಮಾಡಲಾಗುವುದು. ಈ ಕಾರ್ಯ ಪೂರ್ಣಗೊಂಡ ನಂತರ ಭೂ ವಿವಾದಗಳು, ನಕಲಿ ದಾಖಲೆಗಳ ಸೃಷ್ಠಿ, ಕಂದಾಯ ಕಚೇರಿಗಳಿಗೆ ಅಲೆದಾಡುವುದು ತಪ್ಪುತ್ತದೆ, ಭ್ರಷ್ಟಾಚಾರಕ್ಕೆ ಕಡಿವಾಣ ಬೀಳುತ್ತದೆ ಎಂದು ಹೇಳಿದ್ದಾರೆ.

ಸರ್ವೆ ಕಾರ್ಯಕ್ಕಾಗಿ 258 ಕೋಟಿ ನೀಡಲಾಗಿದ್ದು, ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ. ರಾಮನಗರದಲ್ಲಿ ಯೋಜನೆಗೆ ಪ್ರಾಯೋಗಿಕ ಚಾಲನೆ ನೀಡಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...