alex Certify ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣದಲ್ಲಿ ಕ್ಲೀನ್ ಚಿಟ್: ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ಮತ್ತೆ ಹೋರಾಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣದಲ್ಲಿ ಕ್ಲೀನ್ ಚಿಟ್: ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ಮತ್ತೆ ಹೋರಾಟ

ಧಾರವಾಡ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಕ್ಲೀನ್ ಚಿಟ್ ವಿಚಾರಕ್ಕೆ ಸಂಬಂಧಿಸಿದಂತೆ ಕೆ.ಎಸ್. ಈಶ್ವರಪ್ಪ ವಿರುದ್ಧ ಮತ್ತೆ ಹೋರಾಟ ನಡೆಸಲು ಕಾಂಗ್ರೆಸ್ ತೀರ್ಮಾನಿಸಿದೆ.

ಧಾರವಾಡದಲ್ಲಿ ನಡೆದ ಕಾಂಗ್ರೆಸ್ ನವಸಂಕಲ್ಪ ಚಿಂತನಾ ಶಿಬಿರದ ಬಳಿಕ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಸಂತೋಷ್ ಪಾಟೀಲ್ ಆತ್ಮಹತ್ಯೆಯ ನಂತರ ಕೇಸ್ ದಾಖಲಿಸಲು ಆಗ್ರಹಿಸಿದ್ದೆವು. ಆದರೆ, ಈಶ್ವರಪ್ಪ ವಿರುದ್ಧ ಕೇಸ್ ದಾಖಲಿಸದೆ ಕ್ಲೀನ್ ಚಿಟ್ ನೀಡಿದ್ದಾರೆ. ಮತ್ತೆ ಸಚಿವ ಸ್ಥಾನ ಪಡೆಯಲು ಈಶ್ವರಪ್ಪ ಸಜ್ಜಾಗಿದ್ದಾರೆ. ಇವರಿಗೆಲ್ಲಾ ಅಧಿಕಾರದ ಆಸೆ, ಇದೊಂದು ನಿರ್ಜೀವ ಸರ್ಕಾರ. ಹೀಗಾಗಿ ಈಶ್ವರಪ್ಪ ವಿರುದ್ಧ ಮತ್ತೆ ಹೋರಾಟ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...