alex Certify ಕ್ಷುಲ್ಲಕ ಕಾರಣಕ್ಕೆ ವೃದ್ಧನ ಮೇಲೆ ಶಾಸಕರ ಸಹೋದರನಿಂದ ಹಲ್ಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ಷುಲ್ಲಕ ಕಾರಣಕ್ಕೆ ವೃದ್ಧನ ಮೇಲೆ ಶಾಸಕರ ಸಹೋದರನಿಂದ ಹಲ್ಲೆ

ಹೂವಿನ ಹಡಗಲಿ ಕ್ಷೇತ್ರದ ಕಾಂಗ್ರೆಸ್​ ಶಾಸಕ ಪಿ.ಟಿ. ಪರಮೇಶ್ವರ್​ ನಾಯ್ಕ್​ ಸಹೋದರ ಪಿ.ಟಿ. ಶಿವಾಜಿ ನಾಯ್ಕ್​ ಕ್ಷುಲ್ಲಕ ಕಾರಣಕ್ಕೆ ವೃದ್ಧನ ಮೇಲೆ ಹಲ್ಲೆ ಮಾಡಿದ್ದಾರೆ.

ವಿಜಯನಗರ ಜಿಲ್ಲೆ ಲಕ್ಷ್ಮೀಪುರ ಗ್ರಾಮದ ನಿವಾಸಿ ಶರಣ್​ ನಾಯ್ಕ್​ ಎಂಬವವವರ ಮೇಲೆ ಕಬ್ಬಿಣದ ಹಾರೆಯಿಂದ ಶಿವಾಜಿನಾಯ್ಕ್​ ಹಲ್ಲೆ ನಡೆಸಿದ್ದಾರೆ.

ಮನೆಯ ಜಾಗದ ವಿಚಾರವಾಗಿ ಶುರುವಾದ ಜಗಳವು ಹಲ್ಲೆ ನಡೆಸುವಷ್ಟರ ಮಟ್ಟಿಗೆ ಹೋಗಿದೆ ಎನ್ನಲಾಗಿದೆ. ಮಹಿಳೆಯರು ಹಾಗೂ ವೃದ್ಧರ ಎದುರು ಅಶ್ಲೀಲ ಪದ ಬಳಕೆ ಮಾಡಿದ ಶಿವಾಜಿ ನಾಯ್ಕ್,​​ ಬಳಿಕ ಹಾರೆಯಿಂದ ಹಲ್ಲೆ ನಡೆಸಿದ್ದಾರೆ.

ಹಲ್ಲೆಗೊಳಗಾದ ಶರಣ ನಾಯಕ್​ರನ್ನ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಿವಾಜಿ ನಾಯ್ಕ್​ ವೃದ್ಧನ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೋ ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿದೆ .

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...