alex Certify ಸಾರ್ವಜನಿಕರೇ ಎಚ್ಚರ : ಆಶ್ರಯ ಬಡಾವಣೆಯ ನಕಲು ದಾಖಲೆ, ಹಕ್ಕುಪತ್ರ ಸೃಷ್ಠಿ ಮಾರಾಟ ಬಯಲಿಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾರ್ವಜನಿಕರೇ ಎಚ್ಚರ : ಆಶ್ರಯ ಬಡಾವಣೆಯ ನಕಲು ದಾಖಲೆ, ಹಕ್ಕುಪತ್ರ ಸೃಷ್ಠಿ ಮಾರಾಟ ಬಯಲಿಗೆ

ಬಳ್ಳಾರಿ : ಬಳ್ಳಾರಿ ಮಹಾನಗರ ಪಾಲಿಕೆ ವತಿಯಿಂದ ನಗರ ಆಶ್ರಯ ಯೋಜನೆಯಡಿ ಆಶ್ರಯ ಬಡಾವಣೆ ರಚನೆ ಮಾಡಿ ವಸತಿ ರಹಿತ ಕುಟುಂಬಗಳಿಗೆ ನಿವೇಶನ, ಮನೆಗಳನ್ನು ಹಂಚಿಕೆ ಮಾಡಲಾಗಿದ್ದು, ಈಗಾಗಲೇ ಹಕ್ಕುಪತ್ರಗಳನ್ನು ವಿತರಿಸಲಾಗಿದೆ. ಕೆಲವು ಪಟ್ಟಭದ್ರ ಹಿತಾಸಕ್ತಿಗಳು ನಕಲು ಹಕ್ಕುಪತ್ರ, ದಾಖಲೆಗಳನ್ನು ಸೃಷ್ಠಿಸಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವುದು ಕಂಡುಬಂದಿದ್ದು, ಸಾರ್ವಜನಿಕರು ಎಚ್ಚರ ವಹಿಸಬೇಕು. ಇಂತಹ ವ್ಯಕ್ತಿಗಳು ಕಂಡುಬಂದಲ್ಲಿ ಪಾಲಿಕೆಗೆ ಕೂಡಲೇ ದೂರು ನೀಡಬೇಕು ಎಂದು ಬಳ್ಳಾರಿ ಮಹಾನಗರ ಪಾಲಿಕೆ ಕಚೇರಿ ಪ್ರಕಟಣೆ ತಿಳಿಸಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...