alex Certify BREAKING NEWS: ಪಿಯು ವಿದ್ಯಾರ್ಥಿನಿಯೊಂದಿಗೆ ಆತ್ಮಹತ್ಯೆಗೆ ಶರಣಾದ ಪ್ರಿಯಕರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಪಿಯು ವಿದ್ಯಾರ್ಥಿನಿಯೊಂದಿಗೆ ಆತ್ಮಹತ್ಯೆಗೆ ಶರಣಾದ ಪ್ರಿಯಕರ

ಚೆನ್ನೈ: ಪಿಯುಸಿ ವಿದ್ಯಾರ್ಥಿನಿ ಜೊತೆ ಪ್ರಿಯಕರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಮಿಳುನಾಡಿನ ಡೆಂಕಣಿಕೋಟೆಯ ಕೆಳಮಂಗಲದಲ್ಲಿ ನಡೆದಿದೆ.

22 ವರ್ಷದ ನರಸಿಂಹ ಮೂರ್ತಿ ಹಾಗೂ ಆತನ ಪ್ರೇಯಸಿ ಪಿಯು ವಿದ್ಯಾರ್ಥಿನಿ ಮನೆಯಲ್ಲಿಯೇ ನೇಣಿಗೆ ಕೊರಳೊಡ್ಡಿದ್ದು, ಆತ್ಮಹತ್ಯೆಗೆ ಶರಣಾಗಿದ್ದಾರೆ. ನರಸಿಂಹ ಮೂರ್ತಿ ಗೌತಾಲಂ ಗ್ರಾಮದ ನಿವಾಸಿಯಾಗಿದ್ದ. ಪ್ರೀತಿಗೆ ಪೋಷಕರ ನಿರಾಕರಣ ಹಿನ್ನೆಲೆಯಲ್ಲಿ ಇಬ್ಬರೂ ನರಸಿಂಹ ಮೂರ್ತಿಯ ಮನೆಯಲ್ಲಿಯೇ ಫ್ಯಾನಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೆಲ ವರ್ಷಗಳಿಂದ ಯುವಕ-ಯುವತಿ ಪ್ರೀತಿಸುತ್ತಿದ್ದರು. ಇಬ್ಬರ ಪ್ರೀತಿಯ ವಿಚಾರ ತಿಳಿದು ಯುವತಿಯ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಇದರಿಂದ ಮನನೊಂದು ಇಬ್ಬರೂ ನೇಣಿಗೆ ಕೊರಳೊಡ್ಡಿದ್ದಾರೆ. ಬೆಳಿಗ್ಗೆ ಮನೆ ಬಾಬಿಲು ತೆರೆಯದಿದ್ದಾಗ ಅನುಮಾನಗೊಂಡು ಬಾಗಿಲು ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...