alex Certify BIG NEWS: ಕಸಾಯಿಕಾನೆಗೆ ಸಾಗಿಸುತ್ತಿದ್ದ 30 ಜಾನುವಾರು ರಕ್ಷಿಸಿದ ಪುನೀತ್ ಕೆರೆಹಳ್ಳಿ ತಂಡ: ವಾಹನ ಚಾಲಕ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಸಾಯಿಕಾನೆಗೆ ಸಾಗಿಸುತ್ತಿದ್ದ 30 ಜಾನುವಾರು ರಕ್ಷಿಸಿದ ಪುನೀತ್ ಕೆರೆಹಳ್ಳಿ ತಂಡ: ವಾಹನ ಚಾಲಕ ಅರೆಸ್ಟ್

ಮಂಡ್ಯ: ಕಸಾಯಿಖಾನೆಗೆ ಅಕ್ರಮವಾಗಿ ಸಾಗಿಸಲಾಗುತ್ತಿದ ಜಾನುವಾರುಗಳನ್ನು ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ನೇತೃತ್ವದ ತಂಡ ರಕ್ಷಿಸಿದೆ.

ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಕಸಾಯಿಖಾನೆಗೆ ವಾಹನದಲ್ಲಿ ಸಾಗಿಸಲಾಗುತ್ತಿತ್ತು. ಈ ವೇಳೆ ಹಿಂದೂಪರ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ಹಾಗೂ ತಂಡದವರು ದಾಳಿ ನಡೆಸಿ ವಾಹನವನ್ನು ತಡೆದಿದ್ದಾರೆ. 30ಕ್ಕೂ ಹೆಚ್ಚು ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ.

ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಮದ್ದೂರು ಪೊಲೀಸರು ವಾಹನ ಚಾಲಕ ಮನ್ಸೂರ್ ಅಹ್ಮದ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಈಚರ್ ವಾಹನದಲ್ಲಿ ಅಕ್ರಮವಾಗಿ ದನಗಳನ್ನು ಸಾಗಾಟ ಮಾಡಲಾಗುತ್ತಿತ್ತು. ಮದ್ದೂರಿನ ಐಬಿ ಸರ್ಕಲ್ ಬಳಿ ವಾಹನ ತಡೆದು ಪರಿಶೀಲಿಸಿದಾಗ ಜಾನುವಾರುಗಳ ಸಾಗಾಟ ಬೆಳಕಿಗೆ ಬಂಧಿದೆ. ಸದ್ಯ ವಾಹನ ಚಾಲಕನನ್ನು ಪೊಲಿಸರು ಬಂಧಿಸಿದ್ದು, ತನಿಖೆ ನಡೆಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...