alex Certify ರಾತ್ರಿಯಿಡಿ ಅಪ್ಪು ಅಂತಿಮ ದರ್ಶನಕ್ಕೆ ಲಕ್ಷಾಂತರ ಜನ: ಉತ್ತರ ಕರ್ನಾಟಕದಿಂದಲೂ ಹರಿದು ಬಂದ ಜನಸಾಗರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾತ್ರಿಯಿಡಿ ಅಪ್ಪು ಅಂತಿಮ ದರ್ಶನಕ್ಕೆ ಲಕ್ಷಾಂತರ ಜನ: ಉತ್ತರ ಕರ್ನಾಟಕದಿಂದಲೂ ಹರಿದು ಬಂದ ಜನಸಾಗರ

ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪುನೀತ್ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಕ್ರೀಡಾಂಗಣದ ಒಳಗೆ ಮತ್ತು ಹೊರಗೆ ಅಭಿಮಾನಿಗಳ ದಂಡು ನಡೆದಿದೆ. ಸರತಿಸಾಲಿನಲ್ಲಿ ಬಂದು ಅಭಿಮಾನಿಗಳು ಅಂತಿಮ ದರ್ಶನ ಪಡೆಯುತ್ತಿದ್ದಾರೆ.

ಉತ್ತರ ಕರ್ನಾಟಕದಿಂದಲೂ ಭಾರಿ ಸಂಖ್ಯೆಯ ಅಭಿಮಾನಿಗಳು ಅಂತಿಮ ದರ್ಶನಕ್ಕೆ ಆಗಮಿಸುತ್ತಿದ್ದಾರೆ. ಇದಕ್ಕಾಗಿ ಮೆಜೆಸ್ಟಿಕ್ ನಿಲ್ದಾಣದ ಸುತ್ತಮುತ್ತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಕಂಠೀರವ ಸ್ಟೇಡಿಯಂನಲ್ಲಿ ನಿನ್ನೆ ರಾತ್ರಿಯಿಂದಲೇ ಲಕ್ಷಾಂತರ ಅಭಿಮಾನಿಗಳು ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಭಾರಿ ಸಂಖ್ಯೆಯ ಗಣ್ಯರು, ಅಭಿಮಾನಿಗಳು ಅಂತಿಮ ದರ್ಶನ ಪಡೆಯುತ್ತಿದ್ದು, ಇಂದು ಇಡೀ ದಿನ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಪುನೀತ್ ರಾಜಕುಮಾರ್ ಪುತ್ರಿ ಅಮೆರಿಕದಿಂದ ಆಗಮಿಸಲಿರುವ ಹಿನ್ನೆಲೆಯಲ್ಲಿ ಭಾನುವಾರ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...