alex Certify BIG NEWS: ಕ್ಯಾಪ್ಟನ್​ ಅಮರೀಂದರ್​ ಸಿಂಗ್​ ಬಳಿ ರಾಜೀನಾಮೆ ಕೇಳಿದ ಕಾಂಗ್ರೆಸ್​ ಹೈಕಮಾಂಡ್..​..!? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕ್ಯಾಪ್ಟನ್​ ಅಮರೀಂದರ್​ ಸಿಂಗ್​ ಬಳಿ ರಾಜೀನಾಮೆ ಕೇಳಿದ ಕಾಂಗ್ರೆಸ್​ ಹೈಕಮಾಂಡ್..​..!?

ಪಂಜಾಬ್​ ಕಾಂಗ್ರೆಸ್​ ಸರ್ಕಾರದಲ್ಲಿ ಉಂಟಾಗಿರುವ ಭಿನ್ನಮತವು ಶಮನವಾಗುವ ಯಾವುದೇ ಲಕ್ಷಣಗಳು ಗೋಚರವಾಗುತ್ತಿಲ್ಲ. ಶಾಸಕಾಂಗ ಪಕ್ಷದ ಸಭೆಗೂ ಕೆಲವೇ ಗಂಟೆಗಳ ಮುನ್ನ ಪಂಜಾಬ್​ ಸಿಎಂ ಕ್ಯಾಪ್ಟನ್​ ಅಮರೀಂದರ್​ ಸಿಂಗ್​​ ಪಕ್ಷದ ಶಾಸಕರ ಸಭೆ ಕರೆದಿದ್ದಾರೆ.

ಪಂಜಾಬ್​ ಸಿಎಂ ಕ್ಯಾಪ್ಟನ್​ ಅಮರೀಂದರ್​ ಸಿಂಗ್​ ತಮಗೆ ಅವಮಾನ ಮಾಡಲಾಗಿದೆ ಎಂದು ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಮರೀಂದರ್​ ಸಿಂಗ್​ ಬೆಳಗ್ಗೆ ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿ ಜೊತೆ ಮಾತನಾಡಿದ್ದು ಪಕ್ಷದಿಂದ ತಮಗೆ ಅವಮಾನವಾಗಿದೆ. ಹೀಗಾಗಿ ತಾವು ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದಾರೆ ಎನ್ನಲಾಗಿದೆ.

ಪಕ್ಷದ ಕೆಲವು ಹಿರಿಯ ನಾಯಕರು ನೀಡಿರುವ ಮಾಹಿತಿಯ ಪ್ರಕಾರ ಕಾಂಗ್ರೆಸ್​ ಹೈಕಮಾಂಡ್​ ಈಗಾಗಲೇ ಕ್ಯಾಪ್ಟನ್​ ಅಮರೀಂದರ್​ ಸಿಂಗ್​​ಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಹೇಳಿದೆ. ಇದೇ ಕಾರಣಕ್ಕೆ ಕ್ಯಾಪ್ಟನ್​ ಅಮರೀಂದರ್​ ಸಿಂಗ್​ ಪಕ್ಷವನ್ನೇ ತೊರೆಯಲು ಮುಂದಾಗಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಅಧಿಕೃತ ಮಾಹಿತಿಯೊಂದೇ ಹೊರಬರುವುದು ಬಾಕಿ ಉಳಿದಿದೆ ಎನ್ನಲಾಗ್ತಿದೆ.

ಪಂಜಾಬ್​ನಲ್ಲಿ ಸದ್ಯ ನಿಮಿಷಕ್ಕೊಂದು ರಾಜಕೀಯ ಬೆಳವಣಿಗೆ ಉಂಟಾಗುತ್ತಿದೆ. ಕಾಂಗ್ರೆಸ್​ ಶಾಸಕಾಂಗ ಪಕ್ಷದ ಸಭೆಯ ಬಳಿಕ ಈ ಎಲ್ಲಾ ರಾಜಕೀಯ ಡ್ರಾಮಕ್ಕೆ ತೆರೆ ಬೀಳಲಿದೆ ಎಂದು ಹೇಳಲಾಗ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...