alex Certify ‘ನೀವು ಪ್ರತಿಭಟನೆ ಮಾಡಿ, ಶಾಮಿಯಾನ ವ್ಯವಸ್ಥೆ ನಾವು ಮಾಡುತ್ತೇವೆ : ಕಾಂಗ್ರೆಸ್ ಗೆ ಆರ್.ಅಶೋಕ್ ಟಾಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ನೀವು ಪ್ರತಿಭಟನೆ ಮಾಡಿ, ಶಾಮಿಯಾನ ವ್ಯವಸ್ಥೆ ನಾವು ಮಾಡುತ್ತೇವೆ : ಕಾಂಗ್ರೆಸ್ ಗೆ ಆರ್.ಅಶೋಕ್ ಟಾಂಗ್

ಬೆಂಗಳೂರು : ನೀವು ಪ್ರತಿಭಟನೆ ಮಾಡಿ, ಶಾಮಿಯಾನ ವ್ಯವಸ್ಥೆ ನಾವು ಮಾಡುತ್ತೇವೆ ಎಂದು ಕಾಂಗ್ರೆಸ್ ಗೆ ಮಾಜಿ ಸಚಿವ ಆರ್.ಅಶೋಕ್ ( R.Ashok)  ಟಾಂಗ್ ನೀಡಿದ್ದಾರೆ.

ಅಕ್ಕಿ ವಿತರಿಸದ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಸಿಡಿದೆದ್ದಿದ್ದು, ಜೂನ್ 20 ರಂದು ರಾಜ್ಯಾದ್ಯಂತ ಪ್ರತಿಭಟನೆಗೆ ಡಿಸಿಎಂ ಡಿಕೆ ಶಿವಕುಮಾರ್ ಕರೆ ನೀಡಿದ್ದಾರೆ. ಈ ವಿಚಾರಕ್ಕೆ ಮಾಜಿ ಸಚಿವ ಆರ್ ಅಶೋಕ್ ಟಾಂಗ್ ನೀಡಿದ್ದಾರೆ. ನೀವು ಪ್ರತಿಭಟನೆ ಮಾಡಿ, ಅದಕ್ಕೆ ಬೇಕಾದ ಶಾಮಿಯಾನ ವ್ಯವಸ್ಥೆ ನಾವು ಮಾಡುತ್ತೇವೆ ಎಂದು ಆರ್.ಅಶೋಕ್ ಟಾಂಗ್ ನೀಡಿದ್ದಾರೆ.

ಕಾಂಗ್ರೆಸ್ ಟಿಪ್ಪು ಸಿದ್ದಾಂತಗಳಿಗೆ ಪೂರಕವಾಗಿದೆ, ಕರ್ನಾಟಕವನ್ನು ಕಾಂಗ್ರೆಸ್ ಮಿನಿ ಪಾಕಿಸ್ತಾನ ಮಾಡಲು ಹೊರಟಿದೆ. ರಾಜ್ಯದಲ್ಲಿ 30-40 ಹಿಂದೂಗಳು ಮತಾಂತರವಾಗಿದ್ದಾರೆ, ಮತಾಂತರ ನಿಷೇಧ ಕಾಯಿದೆ ವಾಪಸ್ ಪಡೆಯಬಾರದು.ಎಂದು ಮಾಜಿ ಸಚಿವ ಆರ್ ಅಶೋಕ್ ವಾಗ್ಧಾಳಿ ನಡೆಸಿದ್ದಾರೆ. ಎಪಿಎಂಸಿ ಕಾಯ್ದೆ ಜಾರಿ ಮಾಡಿರುವುದರಲ್ಲಿ ಏನು ತಪ್ಪಿದೆ..? ಇದನ್ನು ಕೂಡ ಕಾಂಗ್ರೆಸ್ ರದ್ದು ಮಾಡಲು ಹೊರಟಿದೆ ಎಂದು ಅಶೋಕ್ ಕಿಡಿಕಾರಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...