alex Certify ಹುತಾತ್ಮ ಕನ್ನಡಿಗ ಯೋಧ ಪ್ರಾಂಜಲ್​ ಅಂತಿಮ ದರ್ಶನ ಪಡೆದ ಆರ್.ಅಶೋಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುತಾತ್ಮ ಕನ್ನಡಿಗ ಯೋಧ ಪ್ರಾಂಜಲ್​ ಅಂತಿಮ ದರ್ಶನ ಪಡೆದ ಆರ್.ಅಶೋಕ್

ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ನಂದನವನ ಲೇಔಟ್ ನಿವಾಸದಲ್ಲಿ ಆರ್.ಅಶೋಕ್ ಅವರು ಹುತಾತ್ಮ ಯೋಧ ಪ್ರಾಂಜಲ್ ಅಂತಿಮ ದರ್ಶನ ಪಡೆದರು.

ನಂತರ ಮಾತನಾಡಿದ ಆರ್ ಅಶೋಕ್ ‘ ದೇಶಕ್ಕಾಗಿ ಧೈರ್ಯ, ಶೌರ್ಯದಿಂದ ಎಂ.ವಿ.ಪ್ರಾಂಜಲ್ ಹೋರಾಡಿದ್ದಾರೆ. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಪುಣ್ಯ ಪುತ್ರ. ವೀರಯೋಧ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಆತ್ಮಕ್ಕೆ ಶಾಂತಿ ಸಿಗಲಿ. ವೀರ ಯೋಧ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್ ಕರ್ನಾಟಕದ ಹೆಮ್ಮೆ ಎಂದು ಹೇಳಿದರು.

ಕಳೆದ ಎರಡು ವರ್ಷಗಳ ಹಿಂದೆಯಷ್ಟೇ ಪ್ರಾಂಜಲ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಅವರ ಪತ್ನಿ ಚೆನ್ನೈ ಐಐಟಿಯಲ್ಲಿ ಎಂಟೆಕ್ ಮಾಡುತ್ತಿದ್ದಾರೆ. ಪ್ರಾಂಜಲ್ ಹುತಾತ್ಮರಾದ ಸುದ್ದಿ ಕೇಳಿ ಅವರ ಕುಟುಂಬಕ್ಕೆ ದಿಗ್ಬ್ರಮೆ ಉಂಟಾಗಿದೆ . ರಜೌರಿ ಎನ್ ಕೌಂಟರ್ ನಲ್ಲಿ ಯೋಧ ಹುತಾತ್ಮರಾಗಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...