ಟೀಂ ಇಂಡಿಯಾದ ಮಾಜಿ ನಾಯಕ ರಾಹುಲ್ ದ್ರಾವಿಡ್ ಭಾರತೀಯ ಕ್ರಿಕೆಟ್ ತಂಡದ ಮುಂದಿನ ಮುಖ್ಯ ಕೋಚ್ ಸ್ಥಾನಕ್ಕೆ ಔಪಚಾರಿಕವಾಗಿ ಅರ್ಜಿ ಸಲ್ಲಿಸಿದ್ದು ಈ ಮೂಲಕ ಅವರು ಟೀಂ ಇಂಡಿಯಾ ತಂಡದ ಉನ್ನತ ಸ್ಥಾನಕ್ಕೆ ಏರುವುದು ಖಚಿತವಾಗಿದೆ.
ಅಲ್ಲದೇ ರಾಹುಲ್ ದ್ರಾವಿಡ್ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹಾಗೂ ಕಾರ್ಯದರ್ಶಿ ಜಯ್ ಶಾರ ಏಕೈಕ ಆಯ್ಕೆಯಾಗಿದ್ದರು ಎನ್ನಲಾಗಿದೆ. ಇಂದು ಹೆಡ್ ಕೋಚ್ ಸ್ಥಾನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನವಾದ್ದರಿಂದ ರಾಹುಲ್ ದ್ರಾವಿಡ್ ಔಪಚಾರಿಕವಾಗಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಬೌಲಿಂಗ್ ಕೋಚ್ ಪರಸ್ ಹಾಗೂ ಫೀಲ್ಡಿಂಗ್ ಕೋಚ್ ಅಭಯ್ ಈಗಾಗಲೇ ಅರ್ಜಿ ಸಲ್ಲಿಕೆ ಮಾಡಿದ್ದಾರೆ ಎಂದು ಬಿಸಿಸಿಐ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಚೀನಾದಲ್ಲಿ ಮತ್ತೆ ಕೊರೊನಾ ನರ್ತನ ಆರಂಭ; ಚಿಂತೆಯಲ್ಲಿ ಮುಳುಗಿದೆ ಡ್ರ್ಯಾಗನ್ ರಾಷ್ಟ್ರ….!
ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವಿನ ಐಪಿಎಲ್ ಫೈನಲ್ ಪಂದ್ಯಾವಳಿಯ ವೇಳೆ ದುಬೈನಲ್ಲಿದ್ದ ದ್ರಾವಿಡ್ ಬಿಸಿಸಿಐ ಆಡಳಿತ ಮಂಡಳಿಯನ್ನು ಭೇಟಿಯಾಗಿದ್ದರು. ಇಲ್ಲಿ ಐಸಿಸಿ ಟಿ 20 ವರ್ಲ್ಡ್ ಕಪ್ ಬಳಿಕ ರವಿ ಶಾಸ್ತ್ರಿ ಹೆಡ್ ಕೋಚ್ ಸ್ಥಾನದಿಂದ ಕೆಳಗಿಳಿಯಲಿದ್ದು ಆ ಬಳಿಕ ರಾಹುಲ್ ದ್ರಾವಿಡ್ರಿಗೆ ಟೀಂ ಇಂಡಿಯಾದ ಈ ಉನ್ನತ ಸ್ಥಾನವನ್ನು ಅಲಂಕರಿಸುವಂತೆ ಗಂಗೂಲಿ ಹಾಗೂ ಜಯ್ ಶಾ ಹೇಳಿದ್ದರು ಎನ್ನಲಾಗಿದೆ.
ರಾಹುಲ್ ದ್ರಾವಿಡ್ ಮಾರ್ಗದರ್ಶನದ ಅಡಿಯಲ್ಲಿ ನ್ಯೂಜಿಲೆಂಡ್ ವಿರುದ್ಧದ ಸರಣಿಯನ್ನು ಟೀಂ ಇಂಡಿಯಾ ಎದುರಿಸಲಿದೆ. ಈ ಸರಣಿಯಲ್ಲಿ ರೋಹಿತ್ ಶರ್ಮಾ ಟೀಂ ಇಂಡಿಯಾ ತಂಡದ ನಾಯಕತ್ವ ವಹಿಸಲಿದ್ದಾರೆ ಎನ್ನಲಾಗಿದೆ.