alex Certify ಶಿವಮೊಗ್ಗದಲ್ಲಿ ಭಾರೀ ಸ್ಪೋಟ ದುರಂತ: ರಾಹುಲ್ ಗಾಂಧಿ, ಪ್ರಹ್ಲಾದ್ ಜೋಶಿ ಸಂತಾಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗದಲ್ಲಿ ಭಾರೀ ಸ್ಪೋಟ ದುರಂತ: ರಾಹುಲ್ ಗಾಂಧಿ, ಪ್ರಹ್ಲಾದ್ ಜೋಶಿ ಸಂತಾಪ

ನವದೆಹಲಿ: ಶಿವಮೊಗ್ಗದಲ್ಲಿ ಜಿಲೆಟಿನ್ ಸ್ಪೋಟ ದುರಂತಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂತಾಪ ಸೂಚಿಸಿದ್ದಾರೆ.

ಕರ್ನಾಟಕದ ಕಲ್ಲು ಗಣಿಗಾರಿಕೆ ಕ್ವಾರಿಯಲ್ಲಿ ಸ್ಫೋಟದಿಂದ ದುರಂತ ಸಮಭವಿಸಿದೆ. ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸುತ್ತೇನೆ. ಭವಿಷ್ಯದಲ್ಲಿ ಈ ರೀತಿಯ ದುರಂತಗಳು ನಡೆಯದಂತೆ ಕ್ರಮ ಕೈಗೊಳ್ಳಬೇಕು. ಇಂತಹ ಘಟನೆಗಳ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

ಶಿವಮೊಗ್ಗ ತಾಲೂಕಿನ ಹುಣಸೋಡು ಗ್ರಾಮದಲ್ಲಿ ಡೈನಾಮೈಟ್ ಲಾರಿ ಸ್ಫೋಟಗೊಂಡು ಆರಕ್ಕೂ ಹೆಚ್ಚು ಕಾರ್ಮಿಕರು ಸಾವನ್ನಪ್ಪಿರುವುದು ದುರದೃಷ್ಟಕರ. ಮೃತರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ. ಅವರ ಕುಟುಂಬದವರಿಗೆ ಸಂತಾಪ ಸೂಚಿಸುತ್ತೇನೆ. ಘಟನೆಯಲ್ಲಿ ಗಾಯಗೊಂಡವರು ಚೇತರಿಸಿಕೊಳ್ಳಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಾರ್ಥಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...