alex Certify VIDEO | ರಾಹುಲ್ ‘ಹಿಂದೂ’ ಧರ್ಮದ ವಿರುದ್ಧ ಮಾತನಾಡಿಲ್ಲ; ವಿಪಕ್ಷ ನಾಯಕನ ಪರ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಬ್ಯಾಟಿಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

VIDEO | ರಾಹುಲ್ ‘ಹಿಂದೂ’ ಧರ್ಮದ ವಿರುದ್ಧ ಮಾತನಾಡಿಲ್ಲ; ವಿಪಕ್ಷ ನಾಯಕನ ಪರ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಬ್ಯಾಟಿಂಗ್

ಇತ್ತೀಚೆಗೆ ಲೋಕಸಭೆಯಲ್ಲಿ ಮಾತನಾಡುವ ವೇಳೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಹಿಂದೂ ಧರ್ಮದ ಕುರಿತು ಪ್ರಸ್ತಾಪಿಸಿದ್ದು, ಇದು ವಿವಾದಕ್ಕೆ ಕಾರಣವಾಗಿತ್ತು. ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿಯ ಹಲವು ನಾಯಕರು ರಾಹುಲ್ ಗಾಂಧಿಯವರ ಈ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ್ದರು.

ಇದೀಗ ರಾಹುಲ್ ಗಾಂಧಿಯವರ ಪರ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಬ್ಯಾಟಿಂಗ್ ಮಾಡಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ. ಮಾಧ್ಯಮ ಪ್ರತಿನಿಧಿಯೊಬ್ಬರ ಜೊತೆ ಮಾತನಾಡುವಾಗ ಅವಿಮುಕ್ತೇಶ್ವರಾನಂದ ಸರಸ್ವತಿ ರಾಹುಲ್ ಗಾಂಧಿಯವರ ಮಾತಿನ ಕುರಿತು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

ಮಾಧ್ಯಮ ಪ್ರತಿನಿಧಿಯ ಪ್ರಶ್ನೆಗೆ ಉತ್ತರಿಸಿದ ಅವರು, ರಾಹುಲ್ ಗಾಂಧಿಯವರ ಹೇಳಿಕೆ ದೊಡ್ಡ ಮಟ್ಟದಲ್ಲಿ ಚರ್ಚೆಯಾದಾಗ ನಾನು ಅವರ ಭಾಷಣದ ಸಂಪೂರ್ಣ ವಿಡಿಯೋ ವೀಕ್ಷಿಸಿದ್ದೇನೆ. ಅವರು ಎಲ್ಲಿಯೂ ಹಿಂದೂ ಧರ್ಮದ ವಿರುದ್ಧ ಮಾತನಾಡಿಲ್ಲ. ಹಿಂದೂ ಧರ್ಮದಲ್ಲಿ ಹಿಂಸೆಗೆ ಸ್ಥಾನವಿಲ್ಲ ಎಂದು ಅವರು ಹೇಳಿದ್ದು, ಇದು ಸತ್ಯವಾಗಿದೆ ಎಂದು ಅವಿಮುಕ್ತೇಶ್ವರಾನಂದ ಸರಸ್ವತಿ ತಿಳಿಸಿದ್ದಾರೆ.

ಅಲ್ಲದೇ ರಾಹುಲ್ ಗಾಂಧಿಯವರ ಭಾಷಣದ ಆಯ್ದ ಭಾಗದ ತುಣುಕುಗಳನ್ನಷ್ಟೇ ಹಂಚಿಕೊಳ್ಳುವ ಮೂಲಕ ಅಪಪ್ರಚಾರ ನಡೆಸುತ್ತಿರುವವರ ಕುರಿತು ತನಿಖೆ ನಡೆಸಬೇಕು ಎಂದು ಅವಿಮುಕ್ತೇಶ್ವರಾನಂದ ಸರಸ್ವತಿ ಹೇಳಿದ್ದಾರೆ. ರಾಹುಲ್ ಗಾಂಧಿಯವರು ಲೋಕಸಭೆಯಲ್ಲಿ ಮಾತನಾಡುವಾಗ ತಮ್ಮನ್ನು ತಾವು ಹಿಂದೂ ಎಂದು ಕರೆದುಕೊಳ್ಳುವ ಕೆಲವರು, 24 ಗಂಟೆಗಳ ಕಾಲವೂ ಹಿಂಸೆ, ದ್ವೇಷ ಹರಡುತ್ತಿದ್ದಾರೆ ಎಂದಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದ ಪ್ರಧಾನಿ ನರೇಂದ್ರ ಮೋದಿ, ರಾಹುಲ್ ಹಿಂದೂಗಳಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿದ್ದರು.

— Indian Youth Congress (@IYC) July 7, 2024

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...