alex Certify ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಅಬ್ಬರ: ಸಿಡಿಲಿಗೆ ನಾಲ್ವರು ಬಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಅಬ್ಬರ: ಸಿಡಿಲಿಗೆ ನಾಲ್ವರು ಬಲಿ

ಬೆಂಗಳೂರು: ರಾಜ್ಯದ ವಿವಿಧ ಗುಡುಗು ಸಿಡಿಲು ಸಹಿತ ಮಳೆಯಾಗಿದ್ದು, ಸಿಡಿಲು ಬಡಿದು ನಾಲ್ವರು ಸಾವನ್ನಪ್ಪಿದ್ದಾರೆ.

ಶಿವಮೊಗ್ಗ ನಗರದ ಬೊಮ್ಮನಕಟ್ಟೆ ಆಶ್ರಯ ಬಡಾವಣೆಯಲ್ಲಿ ಸಿಡಿಲು ಬಡಿದು 27 ವರ್ಷದ ಲಕ್ಷ್ಮೀಬಾಯಿ ಮೃತಪಟ್ಟಿದ್ದಾರೆ. ಕುರಿಗಳಿಗೆ ಮೇವು ತರಲು ಹೋಗಿದ್ದ ವೇಳೆ ಅವರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.

ಬಳ್ಳಾರಿ ತಾಲೂಕಿನ ಕುಂಟನಹಾಳ ಗ್ರಾಮದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ರೈತ ಪಂಪಣ್ಣ ಮೃತಪಟ್ಟಿದ್ದಾರೆ. ಕಲಬುರ್ಗಿ ಜಿಲ್ಲೆಯ ತಾಲೂಕಿನ ರೇವೂರ ಬಿ ಗ್ರಾಮದ ನಸುರುದ್ದೀನ್ ದರ್ಗಾ ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ರೈತ ಮಾಳಪ್ಪ ದತ್ತಪ್ಪ ಪೂಜಾರಿ(32) ಸಾವನ್ನಪ್ಪಿದ್ದಾರೆ.

ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಕಿರಿಶ್ಯಾಳ ಗ್ರಾಮದಲ್ಲಿ ಸಿಡಿಲು ಬಡಿದು ರೈತ ದ್ಯಾಮಣ್ಣ ಸಿದ್ದಪ್ಪ ಸೆರೆಕಾರ(20) ಸಾವನ್ನಪ್ಪಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...