alex Certify ತೇವಾಂಶಭರಿತ ಮೋಡಗಳ ಪರಿಣಾಮ ಇನ್ನೂ 5 ದಿನ ಮಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತೇವಾಂಶಭರಿತ ಮೋಡಗಳ ಪರಿಣಾಮ ಇನ್ನೂ 5 ದಿನ ಮಳೆ

ಬೆಂಗಳೂರು: ರಾಜ್ಯದಲ್ಲಿ ಅಲ್ಲಲ್ಲಿ ಮಳೆಯಾಗುತ್ತಿದ್ದು, ಇನ್ನೂ ಐದು ದಿನಗಳ ಕಾಲ ಮುಂದುವರೆಯಲಿದೆ. ತೇವಾಂಶಭರಿತ ಮೋಡಗಳ ಪರಿಣಾಮದಿಂದ ರಾಜ್ಯದ ಹಲವೆಡೆ ಮಳೆಯಾಗಲಿದೆ.

ಕೆಲವು ಜಿಲ್ಲೆಗಳಲ್ಲಿ ಜೋರು ಮಳೆಯಾಗಿದೆ. ಇನ್ನು ಏಪ್ರಿಲ್ 25 ರವರೆಗೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಭಾಗದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ. ಅದೇ ರೀತಿ ದಕ್ಷಿಣ ಒಳನಾಡು ಭಾಗದ ಶಿವಮೊಗ್ಗ, ಕೊಡಗು, ಹಾಸನ, ಚಾಮರಾಜನಗರ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುಡುಗು ಸಿಡಿಲು ಸಹಿತ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕೆಲವೆಡೆ ಒಣಹವೆ ಮುಂದುವರೆಯಲಿದೆ. ಹಗುರದಿಂದ ಕೂಡಿದ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...