alex Certify Rain Alert : ನಾಳೆವರೆಗೂ ಮಾತ್ರ ರಾಜ್ಯದಲ್ಲಿ ‘ಮಳೆ’ ಆಟ : ಆಮೇಲೆ ವಿಪರೀತ ಚಳಿ ಕಾಟ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Rain Alert : ನಾಳೆವರೆಗೂ ಮಾತ್ರ ರಾಜ್ಯದಲ್ಲಿ ‘ಮಳೆ’ ಆಟ : ಆಮೇಲೆ ವಿಪರೀತ ಚಳಿ ಕಾಟ..!

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ನಾಳೆವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೂ ಜ.12 ರಿಂದ ಮತ್ತೆ ರಾಜ್ಯದಲ್ಲಿ ವಿಪರೀತ ಚಳಿ ಮುಂದುವರೆಯಲಿದೆ.

ಇಂದು ಮತ್ತು ನಾಳೆ ಕರಾವಳಿ ಜಿಲ್ಲೆ ಸೇರಿದಂತೆ ಹಲವು ಕಡೆ ಸಾಧಾರಣೆ ಮಳೆಯಾಗಲಿದೆ. ಕೆಲವು ಕಡೆ ಮೋಡ ಮುಸುಕಿದ ವಾತಾವರಣವಿರಲಿದೆ.

ಜನವರಿ 10 ಹಾಗೂ 11 ರಂದು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆಯಿದೆ. ನಂತರ ಉತ್ತರ ಕರ್ನಾಟಕದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ ಹಾಗೂ ಕಲಬುರಗಿ, ವಿಜಯಪುರದ ಪ್ರತ್ಯೇಕ ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, , ಚಿತ್ರದುರ್ಗ, ದಾವಣಗೆರೆ ಸೇರಿದಂತೆ ಕೋಲಾರ, ಮಂಡ್ಯ, ಮೈಸೂರು, ರಾಮನಗರ, ವಿಜಯನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ತುಮಕೂರಲ್ಲಿ ಮಳೆಯಾಗುವ ಮುನ್ಸೂಚನೆಯಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...