
ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಇಲ್ಲವಾಗಿದ್ದು, ಬಿಸಿಲ ತಾಪಮಾನ ಹೆಚ್ಚಾಗುತ್ತಿದೆ.
ಕೊಡಗು, ಮೈಸೂರು ಸೇರಿದಂತೆ ಒಂದೆರಡು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗಾಳಿಯ ವೇಗ 30 – 40 ಕಿ.ಮೀ. ಇರಲಿದೆ. ಪ್ರಸ್ತುತ ಒಳನಾಡು ಜಿಲ್ಲೆಗಳಲ್ಲಿ ಮಲೆನಾಡು ಭಾಗದಲ್ಲಿ ಮಳೆ ತಗ್ಗಿದ್ದು, ಒಣಹವೆ ಇದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಯ ಕೆಲ ಭಾಗದಲ್ಲಿ ಎರಡು ದಿನ ಆಗುವ ಸಂಭವವಿದೆ ಎಂದು ಹೇಳಲಾಗಿದೆ.