alex Certify ದುಷ್ಕರ್ಮಿಗಳ ಕಲ್ಲು ತೂರಾಟದಲ್ಲಿ ಎರಡು ವರ್ಷದ ಮಗು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದುಷ್ಕರ್ಮಿಗಳ ಕಲ್ಲು ತೂರಾಟದಲ್ಲಿ ಎರಡು ವರ್ಷದ ಮಗು ಸಾವು

ಡುಂಗರ್‌ಪುರ: ರಾಜಸ್ಥಾನದ ಡುಂಗರ್‌ಪುರ ಪ್ರದೇಶದಲ್ಲಿ ದುಷ್ಕರ್ಮಿಗಳು ನಡೆಸಿದ ಕಲ್ಲು ತೂರಾಟದಲ್ಲಿ ಎರಡು ವರ್ಷದ ಮಗು ಸಾವನ್ನಪ್ಪಿರುವ ದಾರುಣ ಘಟನೆ ಶನಿವಾರ ನಡೆದಿದೆ.

ಚೋರಾಸಿ ಠಾಣೆಯ ಪ್ರಭಾರಿ ಅಮೃತಲಾಲ್ ಪ್ರಕಾರ, ಮೃತ ಬಾಲಕ ತನ್ನ ಹೆತ್ತವರೊಂದಿಗೆ ಬೈಕ್‌ನಲ್ಲಿ ಮದುವೆ ಮುಗಿಸಿ ಹಿಂತಿರುಗುತ್ತಿದ್ದಾಗ ಪೋಹ್ರಿ ಖತುರತ್ ಬಳಿ ಕೆಲವು ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರಿಂದ ತೀವ್ರ ಪೆಟ್ಟಾಗಿ ಮೃತಪಟ್ಟಿದ್ದಾನೆ.

ಮದುವೆ ಮುಗಿಸಿ ಮನೆಯವರು ವಾಪಸ್ಸಾಗುತ್ತಿದ್ದಾಗ ನಿನ್ನೆ ದುಷ್ಕರ್ಮಿಗಳು ಬೈಕ್ ತಡೆದು ಕಲ್ಲು ತೂರಾಟ ನಡೆಸಿದ್ದು, ಮಗುವಿನ ತಲೆಗೆ ಕಲ್ಲು ತಗುಲಿ ಮಗು ಸಾವನ್ನಪ್ಪಿದೆ. ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿಗಳಿಗಾಗಿ ಹುಡುಕಾಟ ಆರಂಭಿಸಿದ್ದಾರೆ ಎಂದು ಅಮೃತಲಾಲ್ ತಿಳಿಸಿದ್ದಾರೆ. .

ಗಂಭೀರ ಸ್ಥಿತಿಯಲ್ಲಿದ್ದ ಮಗುವನ್ನು ಪೋಹ್ರಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಮೃತಪಟ್ಟಿದೆ. ಮೃತರ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...