alex Certify ಅಸಾಧಾರಣ ಧೈರ್ಯ ಹೊಂದಿದ್ದ CDS ಬಿಪಿನ್ ರಾವತ್ ನಿಧನದಿಂದ ತುಂಬಲಾರದ ನಷ್ಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಸಾಧಾರಣ ಧೈರ್ಯ ಹೊಂದಿದ್ದ CDS ಬಿಪಿನ್ ರಾವತ್ ನಿಧನದಿಂದ ತುಂಬಲಾರದ ನಷ್ಟ

ನವದೆಹಲಿ: ತಮಿಳುನಾಡಿನಲ್ಲಿ ಇಂದು ನಡೆದ ಅತ್ಯಂತ ದುರಾದೃಷ್ಟಕರ ಹೆಲಿಕಾಪ್ಟರ್ ಅಪಘಾತದಲ್ಲಿ ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಮತ್ತು ಅವರ ಪತ್ನಿ ಹಾಗೂ ಸಶಸ್ತ್ರ ಪಡೆಗಳ 11 ಸಿಬ್ಬಂದಿ ಹಠಾತ್ ನಿಧನದಿಂದ ತೀವ್ರ ದುಃಖವಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ.

. ಜನರಲ್ ಬಿಪಿನ್ ರಾವತ್ ಅಸಾಧಾರಣ ಧೈರ್ಯ ಮತ್ತು ಶ್ರದ್ಧೆಯಿಂದ ದೇಶಕ್ಕೆ ಸೇವೆ ಸಲ್ಲಿಸಿದ್ದರು. ರಕ್ಷಣಾ ಪಡೆಗಳ ಮೊದಲ ಮುಖ್ಯಸ್ಥರಾಗಿ ಜಂಟಿ ಯೋಜನೆಯನ್ನು ಅವರು ಸಿದ್ಧಪಡಿಸಿದ್ದರು. ಅವರ ಅಕಾಲಿಕ ನಿಧನ ಶಸ್ತ್ರಾಸ್ತ್ರ ಪಡೆಗಗಳಿಗೆ ಮತ್ತು ದೇಶಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಹೇಳಿದ್ದಾರೆ.

ಕಾಪ್ಟರ್ ದುರಂತದಲ್ಲಿ ಆತ್ಮೀಯರನ್ನು ಕಳೆದುಕೊಂಡವರ ಕುಟುಂಬಗಳಿಗೆ ಸಂತಾಪಗಳು. ಪ್ರಸ್ತುತ ವೆಲ್ಲಿಂಗ್ಟನ್ ಮಿಲಿಟರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕ್ಯಾಪ್ಟನ್ ವರುಣ್ ಸಿಂಗ್ ಶೀಘ್ರ ಗುಣಮುಖರಾಗಲಿ ಎಂದು ರಾಜನಾಥ್ ಸಿಂಗ್ ಪ್ರಾರ್ಥಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...