alex Certify ಗಣರಾಜ್ಯೋತ್ಸವ ಸಂಭ್ರಮ: ರಾಜಪಥ್ ನಲ್ಲಿ ಭಾರತದ ಶಕ್ತಿ ಪ್ರದರ್ಶನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಣರಾಜ್ಯೋತ್ಸವ ಸಂಭ್ರಮ: ರಾಜಪಥ್ ನಲ್ಲಿ ಭಾರತದ ಶಕ್ತಿ ಪ್ರದರ್ಶನ

ನವದೆಹಲಿ: ದೇಶಾದ್ಯಂತ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ನವದೆಹಲಿಯ ರಾಜಪಥ್ ನಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಧ್ವಜಾರೋಹಣ ನೆರವೇರಿಸಿದ್ದಾರೆ.

ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಿಡಿಎಸ್ ರಾವತ್, ರಕ್ಷಣಾ ಪಡೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು. ಈ ಬಾರಿ ವಿದೇಶಿ ಗಣ್ಯ ಅತಿಥಿ ಇಲ್ಲದೆ ಗಣರಾಜ್ಯೋತ್ಸವ ಸಮಾರಂಭ ನಡೆದಿದೆ.

ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿಗಳು ಗೌರವ ವಂದನೆ ಸ್ವೀಕರಿಸಿದರು. ರಾಜಪಥ್ ನಲ್ಲಿ ಪರೇಡ್ ಆರಂಭವಾಗಿದ್ದು, ಸೇನೆಯ ಪರಾಕ್ರಮ ಪ್ರದರ್ಶಿಸಲಾಗಿದೆ. ಕೊರೋನಾ ಆತಂಕದ ನಡುವೆ ಭಾರೀ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ಭಾರೀ ಬಿಗಿ ಭದ್ರತೆಯೊಂದಿಗೆ ಸಮಾರಂಭ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...