alex Certify ಶುಭ ಸುದ್ದಿ: ಸಾರಿಗೆ ಇಲಾಖೆಯಲ್ಲಿ 13 ಸಾವಿರ ಹುದ್ದೆ ಭರ್ತಿ, 5000 ಬಸ್ ಖರೀದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶುಭ ಸುದ್ದಿ: ಸಾರಿಗೆ ಇಲಾಖೆಯಲ್ಲಿ 13 ಸಾವಿರ ಹುದ್ದೆ ಭರ್ತಿ, 5000 ಬಸ್ ಖರೀದಿ

ದಾವಣಗೆರೆ: ಸಾರಿಗೆ ಇಲಾಖೆಯಲ್ಲಿ 13,000 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ದಾವಣಗೆರೆಯಲ್ಲಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಕಾಮಗಾರಿ ವೀಕ್ಷಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಸಾರಿಗೆ ಸಂಸ್ಥೆಯ 4 ನಿಗಮಗಳಲ್ಲಿ 16,000 ಹುದ್ದೆಗಳು ಖಾಲಿ ಇವೆ. 13 ಸಾವಿರ ಸಿಬ್ಬಂದಿ ನೇಮಕಾತಿಗೆ ತೀರ್ಮಾನ ಕೈಗೊಂಡು ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.

4000 ಬಸ್ ಖರೀದಿಗೆ ಟೆಂಡರ್ ಆಗಿದ್ದು, ಹೆಚ್ಚುವರಿ ಒಂದು ಸಾವಿರ ಬಸ್ ಗಳ ಖರೀದಿ ಸೇರಿ ಒಟ್ಟು 5 ಸಾವಿರ ಬಸ್ ಗಳ ಖರೀದಿಸಲಾಗುವುದು. ನಗರ, ಗ್ರಾಮೀಣ ಸಾರಿಗೆಗೆ ಎಲೆಕ್ಟ್ರಾನಿಕ್ ಬಸ್ ಗಳನ್ನು ನೀಡಲು ಉದ್ದೇಶಿಸಲಾಗಿದೆ. ಕೊರೋನಾ ಸಂದರ್ಭದಲ್ಲಿ ನಿಲ್ಲಿಸಿದ್ದ ಮಾರ್ಗಗಳಲ್ಲಿ ಬಸ್ ಸಂಚಾರ ಪುನಾರಂಭಿಸಲಾಗುವುದು. ಶಕ್ತಿ ಯೋಜನೆಯಡಿ ಮಹಿಳೆಯರು ಪ್ರಯಾಣಿಸಿದ ಒಟ್ಟು ಮೊತ್ತದಲ್ಲಿ 4 ನಿಗಮಗಳಿಗೆ ಜೂನ್ ತಿಂಗಳಲ್ಲಿ ಶೇಕಡ 80ರಷ್ಟು ಮೊತ್ತ ಪಾವತಿ ಮಾಡಲಾಗಿದೆ. ಉಳಿದ ಮೊತ್ತವನ್ನು ಕೂಡ ಶೀಘ್ರವೇ ಪಾವತಿಸುವುದಾಗಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...