alex Certify BIG NEWS: ಪೂಜೆ, ಪುನಸ್ಕಾರಕ್ಕೆ ಆನ್ ಲೈನ್ ವ್ಯವಸ್ಥೆ; ವಿಶೇಷ ಆಪ್ ಬಿಡುಗಡೆ; ಸಚಿವ ರಾಮಲಿಂಗಾರೆಡ್ಡಿ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪೂಜೆ, ಪುನಸ್ಕಾರಕ್ಕೆ ಆನ್ ಲೈನ್ ವ್ಯವಸ್ಥೆ; ವಿಶೇಷ ಆಪ್ ಬಿಡುಗಡೆ; ಸಚಿವ ರಾಮಲಿಂಗಾರೆಡ್ಡಿ ಮಾಹಿತಿ

ಬೆಂಗಳೂರು: ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ದೇವಾಲಯಗಳಲ್ಲಿ ಭಕ್ತಾದಿಗಳ ಅನುಕೂಲಕ್ಕಾಗಿ ಆನ್ ಲೈನ್ ವ್ಯವಸ್ಥೆ ಮಾಡಲಾಗುವುದು ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ಮುಜರಾಯಿ ಇಲಾಖೆ ವ್ಯಾಪ್ತಿಯ ಉನ್ನತ ಮಟ್ಟದ ಅಧಿಕಾರಿಗಳ ಜೊತೆ ಸಭೆ ನಡೆಸಲಾಗಿದ್ದು, ಎಲ್ಲಾ ದೇವಾಲಯಗಳ ಆವರಣಗಳನ್ನು ವ್ಯವಸ್ಥಿತವಾಗಿ ಮಾಡಲು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ. ದೇವಾಲಯಗಳಲ್ಲಿ ಸಿಸಿಟಿವಿ ಕಡ್ಡಾಯ ಮಾಡಲು ತಿಳಿಸಲಾಗಿದೆ ಎಂದರು.

ಪೂಜೆ, ಪುನಸ್ಕಾರಕ್ಕೆ ಆನ್ ಲೈನ್ ನಲ್ಲಿ ಬುಕ್ ಮಾಡಲು ವಿಶೇಷ ಆಪ್ ಬಿಡುಗಡೆ ಮಾಡಲಾಗುವುದು. ಭಕ್ತರ ಅನುಕೂಲಕ್ಕಾಗಿ ಆನ್ ಲೈನ್ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ದೇವಸ್ಥಾನಗಳಲ್ಲಿ ಮೂಲಭೂತ ಸೌಕರ್ಯ ಒದಗಿಸಲು ಗಮನ ಹರಿಸುವಂತೆ ಸೂಚಿಸಲಾಗಿದೆ.

ಕಾಶಿ ಯಾತ್ರೆ, ಮಾನಸ ಸರೋವರ, ಚಾರ್ ಧಾಮ್ ಮತ್ತು ಭಾರತ್ ಗೌರವ್ ಕಾಶಿ ಯಾತ್ರೆಗೆ ಸಹಾಯ ಆಗಲು ಆಪ್ ಬಿಡುಗಡೆ ಮಾಡುತ್ತೇವೆ ಎಂದು ಹೇಳಿದರು.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...