ರಾಮನಗರ: ರಾಮನಗರ ಜಿಲ್ಲೆಯಲ್ಲಿ ಕಾಡಾನೆ ದಾಳಿ ಹೆಚ್ಚುತ್ತಿದ್ದು, ಇದೀಗ ಮತ್ತೋರ್ವ ವ್ಯಕ್ತಿ ಬಲಿಯಾಗಿದ್ದಾರೆ. ರಾಮನಗರ ಜಿಲ್ಲೆ ಗೌಡಹಳ್ಳಿ ಬಳಿ ಕಾಡಾನೆ ವ್ಯಕ್ತಿಯೋರ್ವರನ್ನು ಬಲಿ ಪಡೆದಿದೆ.
ರಾಜು (48) ಕಾಡಾನೆ ದಳಿಂದ ಸಾವನ್ನಪ್ಪಿರುವವರು. ಕಾಡಾನೆ ದಾಳಿಗೆ ಈವರೆಗೆ 10 ಜನರು ಮೃತಪಟ್ಟಿದ್ದಾರೆ. ರಾಮನಗರ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಕಾಡಾನೆ ದಾಳಿ ಹೆಚ್ಚುತ್ತಿದ್ದು, ಜನರು ಜೀವ ಭಯದಲ್ಲಿ ಬದುಕುವಂತಾಗಿದೆ.
ಗ್ರಾಮಸ್ಥರು ಆನೆ ದಾಳಿಯಿಂದ ಸಾವನ್ನಪ್ಪುತ್ತಿದ್ದರೂ ಅರಣ್ಯ ಇಲಾಖೆ ಅಧಿಕಾರಿಗಳು ಆನೆ ದಾಳಿ ತಡೆಗಟ್ಟುವ ನಿಟ್ಟಿನಲ್ಲಿ ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.