alex Certify BREAKING: ಯುವತಿಗೆ ಚಾಕು ಇರಿದು ಅಪಹರಣ; ಕಾರ್ ಚೇಸ್ ಮಾಡಿ ಆರೋಪಿ ಯುವಕನನ್ನು ಬಂಧಿಸಿದ ಪೊಲೀಸರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಯುವತಿಗೆ ಚಾಕು ಇರಿದು ಅಪಹರಣ; ಕಾರ್ ಚೇಸ್ ಮಾಡಿ ಆರೋಪಿ ಯುವಕನನ್ನು ಬಂಧಿಸಿದ ಪೊಲೀಸರು

ರಾಮನಗರ: ಅಪ್ರಾಪ್ತ ಯುವತಿಗೆ ಚಾಕು ಇರಿದು ಬಳಿಕ ಆಕೆಯನ್ನು ಅಪಹರಿಸಿದ್ದ ದುಷ್ಕರ್ಮಿಯನ್ನು ರಾಮನಗರ ಪೊಲೀಸರು ಬಂಧಿಸಿದ್ದಾರೆ.

ರಾಮನಗರದ ಐಬಿ ರಸ್ತೆಯಲ್ಲಿರುವ ಜ್ಯೂನಿಯರ್ ಕಾಲೇಜು ಬಳಿ ಇಂದು ಬೆಳಿಗ್ಗೆ ಇನೋವಾ ಕಾರಿನಲ್ಲಿ ಬಂದ ದುಷ್ಕರ್ಮಿ ಯುವತಿಗೆ ಚಾಕು ಇರಿದು, ಆಕೆಯನ್ನು ಕಿಡ್ನ್ಯಾಪ್ ಮಾಡಿ ಪರಾರಿಯಾಗಿದ್ದ.

ಅಪಹರಣವನ್ನು ತಪ್ಪಿಸಲು ಸ್ಥಳೀಯರು ಯತ್ನಿಸಿದರೂ ಸಾಧ್ಯವಾಗಿರಲಿಲ್ಲ. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಅಪಹರಣಕಾರನ ಕಾರನ್ನು ಬೆನ್ನಟ್ಟಿ ಹೋಗಿ ಆತನನ್ನು ಬಂಧಿಸಿ, ಯುವತಿಯನ್ನು ರಕ್ಷಿಸಿದ್ದಾರೆ.

ಚಾಕು ಇರಿತದಿಂದ ಹಲ್ಲೆಗೊಳಗಾದ ಯುವತಿ ಸಂಜನಾಳನ್ನು ರಕ್ಷಿಸಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...