alex Certify BIG NEWS: ರಮೇಶ ಜಾರಕಿಹೊಳಿಗೆ ದೊಡ್ಡ ಜವಾಬ್ದಾರಿ, ಮುಂದಿನ ಎಲೆಕ್ಷನ್ ನಲ್ಲಿ ಪ್ರಮುಖ ಪಾತ್ರ: ಅರುಣ್ ಸಿಂಗ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಮೇಶ ಜಾರಕಿಹೊಳಿಗೆ ದೊಡ್ಡ ಜವಾಬ್ದಾರಿ, ಮುಂದಿನ ಎಲೆಕ್ಷನ್ ನಲ್ಲಿ ಪ್ರಮುಖ ಪಾತ್ರ: ಅರುಣ್ ಸಿಂಗ್

ಬೆಳಗಾವಿ: ಆದಷ್ಟು ಬೇಗ ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗಲಿದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಹೇಳಿದ್ದಾರೆ. ಅವರೇ ಸಂಪುಟ ವಿಸ್ತರಣೆ ಬಗ್ಗೆ ತೀರ್ಮಾನಿಸುವರು ಎಂದರು.

ನಿನ್ನೆ ರಾತ್ರಿ ರಮೇಶ್ ಜಾರಕಿಹೊಳಿಯವರೊಂದಿಗೆ ಪ್ರತ್ಯೇಕ ಚರ್ಚೆ ನಡೆಸಲಾಗಿದೆ, ರಮೇಶ್ ಜಾರಕಿಹೊಳಿ ನಮ್ಮ ಸ್ನೇಹಿತರಿದ್ದಾರೆ. ಮುಂದಿನ ಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ. ಶೀಘ್ರವೇ ರಮೇಶ ಜಾರಕಿಹೊಳಿ ಅವರಿಗೆ ದೊಡ್ಡ ಜವಾಬ್ದಾರಿ ನೀಡಲಾಗುವುದು. ಮುಂದಿನ ಎಲೆಕ್ಷನ್ ನಲ್ಲಿ ಬಿಜೆಪಿ ಗೆಲ್ಲಿಸಲು, ಕಾಂಗ್ರೆಸ್ ಸೋಲಿಸಲು ರಮೇಶ್ ಜಾರಕಿಹೊಳಿ ಪ್ರಮುಖ ಪಾತ್ರ ವಹಿಸುವರು ಎಂದು ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಬಿಜೆಪಿಗೆ ದೊಡ್ಡ ಶಕ್ತಿಯಾಗಿದ್ದಾರೆ. ಈಗಾಗಲೇ ಅವರು ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದಾರೆ. ಜನ ಕೂಡ ಬಿಜೆಪಿಯತ್ತ ಹೆಚ್ಚಿನ ಒಲವು ಹೊಂದಿದ್ದಾರೆ. ಬಿಜೆಪಿ ಮುಂದಿನ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ. ರಮೇಶ್ ಜಾರಕಿಹೊಳಿಯವರಿಗೆ ಶೀಘ್ರದಲ್ಲೇ ಪಕ್ಷ ದೊಡ್ಡ ಜವಾಬ್ದಾರಿ ನೀಡಲಿದೆ. ಮುಂದಿನ ಚುನಾವಣೆ ಗೆಲ್ಲುವಲ್ಲಿ ರಮೇಶ್ ಜಾರಕಿಹೊಳಿ ಪಾತ್ರ ಮುಖ್ಯವಾಗಿದೆ ಎಂದರು.

ಬಿಜೆಪಿ ನಾಯಕರ ವಿರುದ್ಧವೇ ಯತ್ನಾಳ್ ವಾಗ್ದಾಳಿ ವಿಚಾರಕ್ಕೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ಪ್ರತಿಕ್ರಿಯೆ ನೀಡಿದ ಅರುಣ್ ಸಿಂಗ್, ಯತ್ನಾಳ್ ಅವರನ್ನು ಮಂತ್ರಿ ಮಾಡಿಲ್ಲ ಎಂದು ಹೀಗೆ ಮಾತಾಡುತ್ತಿದ್ದಾರೆ. ಯಾರೇ ಆದರೂ ಪಕ್ಷದ ಚೌಕಟ್ಟಿನಲ್ಲಿಯೇ ಮಾತನಾಡಬೇಕು. ಇಂಥ ಹೇಳಿಕೆ ನೀಡಿದ ಬಗ್ಗೆ ನೋಟಿಸ್ ಜಾರಿ ಮಾಡಿದ್ದೇವೆ. ಈ ರೀತಿ ಮಾತನಾಡದಂತೆ ವಾರ್ನ್ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...