alex Certify ಡಿ.ಕೆ. ಶಿವಕುಮಾರ್ ಗೆ ಒಳ್ಳೆಯದಾಗಲಿ: ರಮೇಶ ಜಾರಕಿಹೊಳಿ ಬಿಗ್ ಬಾಂಬ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಿ.ಕೆ. ಶಿವಕುಮಾರ್ ಗೆ ಒಳ್ಳೆಯದಾಗಲಿ: ರಮೇಶ ಜಾರಕಿಹೊಳಿ ಬಿಗ್ ಬಾಂಬ್

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನೇ ಮಹಾ ಸುದ್ದಿಯೊಂದನ್ನು ಕೊಡುತ್ತೇನೆ ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ.

ಇಂದು ಸಂಜೆ 4 ರಿಂದ 6 ಗಂಟೆಯ ಒಳಗೆ ಸ್ಫೋಟಕ ಸುದ್ದಿ ಬಹಿರಂಗಪಡಿಸುತ್ತೇನೆ. ನಾನೇ ಇದರ ಬಗ್ಗೆ ಮಾತನಾಡುತ್ತೇನೆ ಎಂದು ಬಿಗ್ ಬಾಂಬ್ ಸಿಡಿಸುವುದಾಗಿ ಹೇಳಿದ್ದಾರೆ.

ಯುವತಿ ಕುಟುಂಬದವರೊಂದಿಗೆ ಮಾತನಾಡಿದ್ದಾಳೆನ್ನಲಾದ ಆಡಿಯೋ ಬಹಿರಂಗವಾಗಿದ್ದು, ಅದರಲ್ಲಿ ಡಿ.ಕೆ. ಶಿವಕುಮಾರ್ ಹೆಸರನ್ನು ಪ್ರಸ್ತಾಪಿಸಲಾಗಿದೆ. ಈ ಬಗ್ಗೆ ಮಾತನಾಡಿದ ರಮೇಶ ಜಾರಕಿಹೊಳಿ, ಸಂಜೆ 4 ರಿಂದ 6 ಗಂಟೆಯವರೆಗೆ ಎಲ್ಲ ವಿಷಯವನ್ನು ಬಹಿರಂಗಪಡಿಸುತ್ತೇನೆ ಎಂದು ತಿಳಿಸಿದ್ದಾರೆ.

ಎಫ್ಐಆರ್ ದಾಖಲಾದ ಕೂಡಲೇ ನಾನು ಆರೋಪಿಯಲ್ಲ. ನಾನು ಜಾಮೀನು ಪಡೆಯುವುದಿಲ್ಲ. ಸಂಜೆ 4 ರಿಂದ 6 ಗಂಟೆಗೆ ದೊಡ್ಡ ಸುದ್ದಿ ಸ್ಪೋಟವಾಗಲಿದೆ. ಯಾವ ಆಡಿಯೋ ವಿಚಾರದ ಬಗ್ಗೆಯೂ ನನಗೆ ಗೊತ್ತಿಲ್ಲ. ಡಿ.ಕೆ. ಶಿವಕುಮಾರ್ ಗೆ ಒಳ್ಳೆಯದಾಗಬೇಕು. ನನ್ನ ಕಷ್ಟ, ಸುಖದಲ್ಲಿ ಕೂಡಿ ಬಂದವ ಡಿ.ಕೆ. ಶಿವಕುಮಾರ್. ನಾನು ಯಾರಿಗೂ ಕೆಟ್ಟದ್ದನ್ನು ಬಯಸಿಲ್ಲ. ನಾನು ನಿರಪರಾಧಿ. ಡಿ.ಕೆ. ಶಿವಕುಮಾರ್ ನನ್ನ ಹಳೆಯ ಸ್ಣೇಹಿತ. ನನ್ನಂತೆ ಅವರು ರಾಜೀನಾಮೆ ಕೊಡಬಾರದು. ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆಯಬೇಕು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...