alex Certify ಸಿಡಿ ಕೇಸ್ ಗೆ ಅಚ್ಚರಿ ತಿರುವು, FIR ಗೆ ಮೊದಲೇ ದಿಢೀರ್ ದೂರು ಹಿಂಪಡೆದ ದಿನೇಶ್ ಕಲ್ಲಹಳ್ಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಡಿ ಕೇಸ್ ಗೆ ಅಚ್ಚರಿ ತಿರುವು, FIR ಗೆ ಮೊದಲೇ ದಿಢೀರ್ ದೂರು ಹಿಂಪಡೆದ ದಿನೇಶ್ ಕಲ್ಲಹಳ್ಳಿ

ಬೆಂಗಳೂರು: ಇಡೀ ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ.

ದಿನೇಶ್ ಕಲ್ಲಹಳ್ಳಿ ಯು ಟರ್ನ್ ತೆಗೆದುಕೊಂಡಿದ್ದು, ದೂರು ವಾಪಸ್ ಪಡೆಯಲು ನಿರ್ಧರಿಸಿದ್ದಾರೆ. ತಮ್ಮ ವಕೀಲರನ್ನು ದೂರು ವಾಪಸ್ ಪಡೆಯಲು ಅವರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಕಳುಹಿಸಿದ್ದು ನಿಯಮಾನುಸಾರ ದೂರು ವಾಪಸ್ ಪಡೆಯಬೇಕಿರುವ ಹಿನ್ನೆಲೆಯಲ್ಲಿ ಅವರೇ ಠಾಣೆಗೆ ಆಗಮಿಸಿ ದೂರು ಪಡೆಯಲು ನಿರ್ಧರಿಸಿದ್ದಾರೆ.

ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿಯವರು 5 ಕೋಟಿ ಡೀಲ್ ಬಗ್ಗೆ ಮಾತಾಡಿದ್ದರಿಂದ ನನ್ನ ಮನಸ್ಸಿಗೆ ನೋವಾಗಿದೆ. ಜನ ನನ್ನನ್ನು ನೈತಿಕತೆ ಬಗ್ಗೆ ಪ್ರಶ್ನೆ ಮಾಡುತ್ತಿದ್ದಾರೆ. ಇದು ನನಗೆ ತಿರುಗುಬಾಣವಾಗಿದೆ ಎಂದು ದೂರುದಾರ ದಿನೇಶ್ ಹೇಳಿದ್ದು, ತಾವು ದೂರು ವಾಪಸ್ ಪಡೆಯುವ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಎಫ್ಐಆರ್ ದಾಖಲಾಗುವ ಮೊದಲೇ ದೂರು ವಾಪಸ್ ಪಡೆಯಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...