alex Certify ದಿಢೀರ್ ನಿರ್ಧಾರ ಬದಲಿಸಿದ ರಮೇಶ್ ಜಾರಕಿಹೊಳಿ, ಮುಂಬೈ ಪ್ರಯಾಣ ರದ್ದು -ಬೆಂಗಳೂರಿಗೆ ದೌಡು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದಿಢೀರ್ ನಿರ್ಧಾರ ಬದಲಿಸಿದ ರಮೇಶ್ ಜಾರಕಿಹೊಳಿ, ಮುಂಬೈ ಪ್ರಯಾಣ ರದ್ದು -ಬೆಂಗಳೂರಿಗೆ ದೌಡು

ಬೆಳಗಾವಿ: ಸಂಪುಟ ಸೇರಲು ರಣತಂತ್ರ ರೂಪಿಸುತ್ತಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಮುಂಬೈ ಪ್ರಯಾಣವನ್ನು ದಿಢೀರ್ ರದ್ದುಪಡಿಸಿ ಬೆಂಗಳೂರಿಗೆ ಹೊರಟಿದ್ದಾರೆ.

ನಿನ್ನೆ ಸಹೋದರರೊಂದಿಗೆ ರಹಸ್ಯವಾಗಿ ಸಭೆ ನಡೆಸಿದ ರಮೇಶ್ ಜಾರಕಿಹೊಳಿ ಮಹತ್ವದ ನಿರ್ಧಾರ ಕೈಗೊಂಡಿದ್ದರೆನ್ನಲಾಗಿದೆ. ತಮ್ಮ ನಿರ್ಧಾರದ ಬಗ್ಗೆ ಚರ್ಚಿಸಲು ಮಹಾರಾಷ್ಟ್ರ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಅವರ ಭೇಟಿಗೆ ರಮೇಶ್ ಜಾರಕಿಹೊಳಿ ಮುಂಬೈಗೆ ಹೊರಟಿದ್ದರು. ಆದರೆ,  ಮುಂಬೈ ಭೇಟಿಯನ್ನು ರದ್ದುಪಡಿಸಿಸಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ.

ರಸ್ತೆ ಮಾರ್ಗವಾಗಿ ಅವರು ಬೆಂಗಳೂರಿಗೆ ತೆರಳಿದ್ದು, ನಾಳೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸಲಿದ್ದಾರೆ. ನಂತರ ಬೆಂಗಳೂರಿನಿಂದ ಮುಂಬೈಗೆ ಪ್ರಯಾಣ ಬೆಳೆಸಲಿದ್ದಾರೆ. ದೇವೇಂದ್ರ ಫಡ್ನವೀಸ್ ಜೊತೆ ಚರ್ಚಿಸಿದ ಬಳಿಕ ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿಯಾಗಲಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...