alex Certify ಮುಂದುವರೆದ ರಮೇಶ್ ಜಾರಕಿಹೊಳಿ ಅಸಮಾಧಾನ…? ಬಿಜೆಪಿ ಎಸ್.ಟಿ. ಸಮಾವೇಶಕ್ಕೆ ಗೈರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮುಂದುವರೆದ ರಮೇಶ್ ಜಾರಕಿಹೊಳಿ ಅಸಮಾಧಾನ…? ಬಿಜೆಪಿ ಎಸ್.ಟಿ. ಸಮಾವೇಶಕ್ಕೆ ಗೈರು

ಬಳ್ಳಾರಿಯಲ್ಲಿ ಬಿಜೆಪಿ ಹಮ್ಮಿಕೊಂಡಿರುವ ಪರಿಶಿಷ್ಟ ಪಂಗಡಗಳ ನವಶಕ್ತಿ ಸಮಾವೇಶಕ್ಕೆ ಮಾಜಿ ಸಚಿವ ರಮೇಶ ಜಾರಕಿಹೊಳಿ ಗೈರು ಹಾಜರಾಗಿದ್ದಾರೆ.

ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳದ ನಂತರ ಇದೇ ಮೊದಲ ಬಾರಿಗೆ ಬಿಜೆಪಿ ಎಸ್.ಟಿ. ಮೋರ್ಚಾ ಬಳ್ಳಾರಿಯಲ್ಲಿ ನವಶಕ್ತಿ ಸಮಾವೇಶ ಹಮ್ಮಿಕೊಂಡಿದ್ದು, ಬಿಜೆಪಿಯ ರಾಷ್ಟ್ರೀಯ ನಾಯಕರು, ರಾಜ್ಯ ನಾಯಕರು ಸೇರಿದಂತೆ ಲಕ್ಷಾಂತರ ಮಂದಿ ಭಾಗವಹಿಸಿದ್ದಾರೆ.

ತಮ್ಮದೇ ಸಮುದಾಯದ ಬೃಹತ್ ಕಾರ್ಯಕ್ರಮ ನಡೆಯುತ್ತಿದ್ದರೂ ರಮೇಶ ಜಾರಕಿಹೊಳಿ ಗೈರು ಹಾಜರಾಗಿದ್ದಾರೆ. ಸಚಿವ ಸ್ಥಾನ ಸಿಗದೇ ಅಸಮಾಧಾನಗೊಂಡಿರುವ ರಮೇಶ್ ಜಾರಕಿಹೊಳಿ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದಾರೆ. ನಿನ್ನೆಯಷ್ಟೇ ಹೆಚ್.ಡಿ. ಕುಮಾರಸ್ವಾಮಿ ಸಂಪರ್ಕದಲ್ಲಿದ್ದಾರೆ. ನಾನು ಜೆಡಿಎಸ್ ಸೇರುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದ ರಮೇಶ್ ಜಾರಕಿಹೊಳಿ ಇಂದು ತಮ್ಮದೇ ಸಮುದಾಯದ ಬೃಹತ್ ಕಾರ್ಯಕ್ರಮಕ್ಕೆ ಗೈರುಹಾಜರಾಗುವ ಮೂಲಕ ಸಚಿವ ಸ್ಥಾನ ಸಿಗದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...