alex Certify ರಾಮೇಶ್ವರಂ ಕೆಫೆ ಸ್ಪೋಟ ಕೇಸ್: ಮತ್ತಿಬ್ಬರು ಶಂಕಿತರು ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಮೇಶ್ವರಂ ಕೆಫೆ ಸ್ಪೋಟ ಕೇಸ್: ಮತ್ತಿಬ್ಬರು ಶಂಕಿತರು ವಶಕ್ಕೆ

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಿಬ್ಬರನ್ನು ರಾಷ್ಟ್ರೀಯ ತನಿಖಾ ದಳ(NIA) ವಶಕ್ಕೆ ಪಡೆದುಕೊಂಡಿದೆ.

ಶಂಕಿತರ ಜೊತೆ ಸಂಪರ್ಕ ಹೊಂದಿರುವ ಹಿನ್ನೆಲೆಯಲ್ಲಿ ಮತ್ತಿಬ್ಬರನ್ನು ವಶಕ್ಕೆ ಪಡೆಯಲಾಗಿದೆ. ನಿಷೇಧಿತ ಅಲ್ ಹಿಂದ್ ಟ್ರಸ್ಟ್ ಜೊತೆಗೆ ಶಂಕಿತರು ನಂಟು ಹೊಂದಿದ್ದರು. ಇಬ್ಬರನ್ನು ವಶಕ್ಕೆ ಪಡೆದ ಎನ್ಐಎ ವಿಚಾರಣೆ ನಡೆಸಿದೆ. ರಾಮೇಶ್ವರಂ ಕೆಫೆ ಸ್ಪೋಟ ಮತ್ತು ಹಳೆ ಸ್ಫೋಟ ಪ್ರಕರಣಗಳ ನಡುವೆ ಸಾಮ್ಯತೆ, ಹಳೆ ಪ್ರಕರಣದಲ್ಲಿ ಭಾಗಿಯಾದ ಹಲವರ ಮೇಲೆ ನಿಗಾವಹಿಸಿದೆ.

ಈಗಾಗಲೇ ಜೈಲಿನಲ್ಲಿರುವ ಹಲವರನ್ನು ಎನ್ಐಎ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ತಲೆಮರೆಸಿಕೊಂಡಿರುವ ಇನ್ನು ಹಲವರ ಮೇಲೆ ಕಣ್ಣಿಟ್ಟಿದ್ದು, ಶಂಕಿತರಿಗೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ನೆರವು ನೀಡಿದವರ ಮೇಲೆಯೂ ನಿಗಾವಹಿಸಲಾಗಿದೆ. ನೆರವು ನೀಡಿದವರನ್ನು ಪತ್ತೆ ಹಚ್ಚಿ ವಿಚಾರಣೆ ನಡೆಸಲಾಗುತ್ತಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...