ಬೆಂಗಳೂರು : ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ NIA ಅಧಿಕಾರಿಗಳು ಆರೋಪಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದು, ಇದೀಗ ಕಲಬುರಗಿಗೆ ಆಗಮಿಸಿದ್ದಾರೆ.
ಸ್ಥಳೀಯ ಪೋಲಿಸರ ಜೊತೆಗೂಡಿ ನಗರದಲ್ಲಿ ಬೆಳಿಗ್ಗೆಯಿಂದ ರೈಲು ನಿಲ್ದಾಣದಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ. ರೈಲು ನಿಲ್ದಾಣದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ಎನ್ ಐ ಎ ತಂಡ ರೈಲು ನಿಲ್ದಾಣದಲ್ಲಿ ತೀವ್ರ ಶೋಧ ನಡೆಸುತ್ತಿದೆ. ಬಳ್ಳಾರಿಯಿಂದ ಬಸ್ ಮೂಲಕ ಹುಬ್ಬಳ್ಳಿಗೆ ಬಾಂಬರ್ ಆಗಮಿಸಿದ ಶಂಕೆ ವ್ಯಕ್ತವಾಗಿದೆ.