alex Certify BIG NEWS: ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರಕ್ಕೆ ಟೈಟಲ್ ಕಿರಿಕ್; ದೂರು ನೀಡಿದ ರಾಜೇಂದ್ರ ಸಿಂಗ್ ಬಾಬು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರಕ್ಕೆ ಟೈಟಲ್ ಕಿರಿಕ್; ದೂರು ನೀಡಿದ ರಾಜೇಂದ್ರ ಸಿಂಗ್ ಬಾಬು

ಬೆಂಗಳೂರು: ರಾಜ್ ಬಿ ಶೆಟ್ಟಿ ಅಭಿನಯದ ನಟಿ ರಮ್ಯಾ ನಿರ್ಮಾಣದ ಮೊದಲ ಸಿನಿಮಾ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದ ಟೈಟಲ್ ವಿವಾದ ಆರಂಭವಾಗಿದೆ. ಈ ಶೀರ್ಷಿಕೆಯನ್ನು ಬೇರೆ ಯಾರಿಗೂ ಕೊಡುವಂತಿಲ್ಲ ಎಂದು ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಕ್ಯಾತೆ ತೆಗೆದಿದ್ದಾರೆ.

ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದ ಶೂಟಿಂಗ್ ಕೂಡ ಭರದಿಂದ ಸಾಗಿದೆ. ನಟಿ ರಮ್ಯಾ ಇದು ತಮ್ಮ ಮೊದಲ ನಿರ್ಮಾಣದ ಚಿತ್ರ ಎಂದು ಉತ್ಸಾಹದಲ್ಲಿದ್ದಾರೆ. ಈವರೆಗೆ ಸುಮ್ಮನಿದ್ದ ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಈಗ ʼಸ್ವಾತಿ ಮುತ್ತಿನ ಮಳೆ ಹನಿಯೇʼ ಶೀರ್ಷಿಕೆಯನ್ನು ಬಳಸುವಂತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರದ ಮೂಲಕ ದೂರು ನೀಡಿರುವ ರಾಜೇಂದ್ರ ಸಿಂಗ್ ಬಾಬು, ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರದ ಟೈಟಲ್ ನ್ನು ತಾವು ನೋಂದಾಯಿಸಿದ್ದು, ಬೇರೆ ಯಾರಿಗೂ ಬಳಸಲು ಅವಕಾಶ ನೀಡಬಾರದು ಎಂದು ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...