alex Certify ಬಿಡುಗಡೆಗೂ ಮುನ್ನವೇ ವಿವಾದಕ್ಕೆ ಸಿಲುಕಿದ ‘ಶಮ್ಶೇರಾ’ ; ಹಿಂದೂಗಳ ಭಾವನೆಗೆ ಧಕ್ಕೆ ತಂದ ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಡುಗಡೆಗೂ ಮುನ್ನವೇ ವಿವಾದಕ್ಕೆ ಸಿಲುಕಿದ ‘ಶಮ್ಶೇರಾ’ ; ಹಿಂದೂಗಳ ಭಾವನೆಗೆ ಧಕ್ಕೆ ತಂದ ಆರೋಪ

ರಣಬೀರ್ ಕಪೂರ್, ಸಂಜಯ್ ದತ್ ನಟಿಸಿರುವ ‘ಶಮ್ಶೇರಾ’ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಕೆಲ ದಿನಗಳ ಹಿಂದೆ ಈ ಚಿತ್ರದ ಟ್ರೈಲರ್ ರಿಲೀಸ್ ಮಾಡಲಾಗಿದ್ದು, ಅದರಲ್ಲಿನ ದೃಶ್ಯಗಳನ್ನು ನೋಡಿ ಬಹಳಷ್ಟು ಮಂದಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈ ಚಿತ್ರದಲ್ಲಿ ಸಂಜಯ್ ದತ್ ಶುದ್ಧ ಸಿಂಗ್ ಎಂಬ ಪೊಲೀಸ್ ಅಧಿಕಾರಿಯ ಪಾತ್ರವನ್ನು ನಿರ್ವಹಿಸಿದ್ದು, ಖಳನಂತೆ ಬಿಂಬಿಸಲಾಗಿದೆ. ಅಲ್ಲದೆ ಆತ ಉದ್ದ ಜಡೆ ಬಿಟ್ಟು ಹಣೆ ತುಂಬಾ ವಿಭೂತಿ ಹಾಗೂ ಕುಂಕುಮದ ತಿಲಕ ಧರಿಸಿದ್ದು ಇದು ಕೂಡ ಆಕ್ರೋಶಕ್ಕೆ ಕಾರಣವಾಗಿದೆ.

ಬಾಲಿವುಡ್ ಚಿತ್ರಗಳಲ್ಲಿ ಈ ಮೊದಲಿನಿಂದಲೂ ಸನಾತನ ಧರ್ಮವನ್ನು ಅವಹೇಳನಕಾರಿಯಾಗಿ ಚಿತ್ರಿಸಿಕೊಂಡು ಬಂದಿದ್ದು, ಈ ಚಿತ್ರದಲ್ಲೂ ಅದನ್ನು ಮುಂದುವರಿಸಲಾಗಿದೆ ಎಂಬ ಅಸಮಾಧಾನ ವ್ಯಕ್ತವಾಗಿದೆ.

ಈ ರೀತಿ ಹಿಂದೂಗಳ ಭಾವನೆಗೆ ಧಕ್ಕೆ ತಂದಿರುವ ‘ಶಮ್ಶೇರಾ’ ಚಿತ್ರವನ್ನು ಬಹಿಷ್ಕರಿಸಬೇಕೆಂಬ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚಿತ್ರ ಬಿಡುಗಡೆಗೂ ಮುನ್ನವೇ ವಿವಾದಕ್ಕೆ ಕಾರಣವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...