alex Certify ಅತ್ಯಾಚಾರ ಎಸಗಿದ ಗಂಟೆಯೊಳಗೆ ಆರೋಪಿ ಅರೆಸ್ಟ್: ಇಲ್ಲೇ ಶೂಟ್ ಮಾಡಿ ಎಂದು ಸಂಬಂಧಿಕರ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅತ್ಯಾಚಾರ ಎಸಗಿದ ಗಂಟೆಯೊಳಗೆ ಆರೋಪಿ ಅರೆಸ್ಟ್: ಇಲ್ಲೇ ಶೂಟ್ ಮಾಡಿ ಎಂದು ಸಂಬಂಧಿಕರ ಆಕ್ರೋಶ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆಯಲ್ಲಿ ಮಾತನಾಡಲು ಬಾರದ ಮಹಿಳೆ ಮೇಲೆ ಕಾಮುಕ ಅತ್ಯಾಚಾರ ಎಸಗಿದ್ದು, ಘಟನೆ ನಡೆದ ಒಂದು ಗಂಟೆಯೊಳಗೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆತನನ್ನು ವೈದ್ಯಕೀಯ ಪರೀಕ್ಷೆಗೆ ಕರೆದುಕೊಂಡ ಸಂದರ್ಭದಲ್ಲಿ ಪ್ರತಿಭಟನೆ ನಡೆಸಿದ ಸಂಬಂಧಿಕರು ಮತ್ತು ಸಾರ್ವಜನಿಕರು ಆರೋಪಿಯನ್ನು ಕೋರ್ಟಿಗೆ ಕರೆದುಕೊಂಡು ಹೋಗದೆ ನಮ್ಮ ಎದುರಲ್ಲೇ ಶೂಟ್ ಮಾಡಬೇಕು. ಇಲ್ಲದಿದ್ದರೆ ನಮ್ಮ ವಶಕ್ಕೆ ಕೊಡಬೇಕು ಎಂದು ಪ್ರತಿಭಟನೆ ನಡೆಸಿದ್ದಾರೆ. ಆಕ್ರೋಶಗೊಂಡ ಜನ ಆರೋಪಿ ಮೇಲೆ ದಾಳಿ ಮಾಡಲು ಮುಂದಾದಾಗ ಪೊಲೀಸರು ಲಾಠಿ ಬೀಸಿ ಚದುರಿಸಿದ್ದಾರೆ.

ಚಿತ್ರದುರ್ಗ ತಾಲೂಕು ಲಕ್ಷ್ಮೀಸಾಗರದ ನಾಗರಾಜ ಬಂಧಿತ ಆರೋಪಿಯಾಗಿದ್ದಾನೆ. ಲಾರಿ ಚಾಲಕನಾಗಿರುವ ಗುರುವಾರ ರಾತ್ರಿ ಹೊಳಲ್ಕೆರೆ ಸಮೀಪದ ತುಪ್ಪದಹಳ್ಳಿ ಗ್ರಾಮಕ್ಕೆ ಬಸ್ ನಲ್ಲಿ ಬಂದು ಲಂಬಾಣಿಹಟ್ಟಿ ತಾಂಡಕ್ಕೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ರಾತ್ರಿ 9.30 ವೇಳೆ ಮಹಿಳೆಯೊಂದಿಗೆ ಬಸ್ ನಲ್ಲಿ ಬಂದಿದ್ದ ನಾಗರಾಜ ಆಕೆಯನ್ನು ಹಿಂಬಾಲಿಸಿಕೊಂಡು ಎಳೆದೊಯ್ದು ಅತ್ಯಾಚಾರವೆಸಗಿ ಕೊಲೆ ಮಾಡಲು ಮುಂದಾಗಿದ್ದಾನೆ. ಈ ವೇಳೆ ಆತನಿಂದ ತಪ್ಪಿಸಿಕೊಂಡ ಮಹಿಳೆ ಗ್ರಾಮಕ್ಕೆ ಓಡಿದ್ದಾಳೆ. ಮಾಹಿತಿ ಪಡೆದ ಪೊಲೀಸರು ಘಟನೆ ನಡೆದ ಒಂದು ಗಂಟೆಯೊಳಗೆ ಆರೋಪಿಯನ್ನು ಬಂಧಿಸಿದ್ದಾರೆ. ಆತನನ್ನು ವೈದ್ಯಕೀಯ ಪರೀಕ್ಷೆಗೆ ಕರೆದುಕೊಂಡು ಬಂದ ಸಂದರ್ಭದಲ್ಲಿ ಸಂಬಂಧಿಕರು ಠಾಣೆ ಎದುರು ಪ್ರತಿಭಟನೆ ನಡೆಸಿ ಕಠಿಣ ಶಿಕ್ಷೆ ನೀಡಬೇಕೆಂದು ಒತ್ತಾಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...