alex Certify ಆಟೋ ಚಾಲಕನಿಂದ ಆಘಾತಕಾರಿ ಕೃತ್ಯ: ನಿರ್ಜನ ಪ್ರದೇಶಕ್ಕೆ ಯುವತಿ ಕರೆದೊಯ್ದು ಅತ್ಯಾಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಟೋ ಚಾಲಕನಿಂದ ಆಘಾತಕಾರಿ ಕೃತ್ಯ: ನಿರ್ಜನ ಪ್ರದೇಶಕ್ಕೆ ಯುವತಿ ಕರೆದೊಯ್ದು ಅತ್ಯಾಚಾರ

ಬೆಂಗಳೂರು: ಆಟೋದಲ್ಲಿ ಪ್ರಯಾಣಿಸುತ್ತಿದ್ದ ಯುವತಿಯನ್ನು ನಿರ್ಜನ ಕರೆದೊಯ್ದು ಅತ್ಯಾಚಾರ ಎಸಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ದೇವನಹಳ್ಳಿಯ ಮುಬಾರಕ್(28) ಬಂಧಿತ ಆರೋಪಿ ಎಂದು ಹೇಳಲಾಗಿದೆ. ಸಂಪಿಗೆಹಳ್ಳಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಯುವತಿ ಪಾರ್ಟ್ ಟೈಮ್ ಕೆಲಸ ಮಾಡಿಕೊಂಡು ಓದುತ್ತಿದ್ದು ಮದುವೆ ಸಮಾರಂಭಗಳಲ್ಲಿ ಸ್ವಾಗತಕಾರಳಾಗಿ ಕೆಲಸ ಮಾಡುತ್ತಿದ್ದಾಳೆ. ಹೀಗೆ ಮದುವೆ ಸಮಾರಂಭ ಮುಗಿಸಿ ಮನೆಗೆ ಹೋಗಲು ತಡರಾತ್ರಿ ಆಗಿದ್ದ ಕಾರಣ ಮದುವೆ ಮಂಟಪದಲ್ಲೇ ಉಳಿದುಕೊಂಡು ಬೆಳಗ್ಗೆ 6 ಗಂಟೆಗೆ ಥಣಿಸಂದ್ರ ಮುಖ್ಯರಸ್ತೆಯಲ್ಲಿ ಮನೆಗೆ ಹೋಗಲು ಬಸ್ ಗೆ  ಕಾದಿದ್ದಾಳೆ.

ಅಲ್ಲಿಗೆ ಬಂದ ಮುಬಾರಕ್ ಬಸ್ ಬರುವುದಿಲ್ಲ ಎಂದು ಹೇಳಿ ಆಟೋ ಹತ್ತಿಸಿಕೊಂಡಿದ್ದಾನೆ. ನಾಗವಾರ ಕಡೆಗೆ ಹೋಗಬೇಕಿದ್ದ ಆರೋಪಿ, ಸ್ನೇಹಿತರೊಬ್ಬರು ಹಣ ಕೊಡಬೇಕಿದೆ. ಅದನ್ನು ತೆಗೆದುಕೊಂಡು ಹೋಗೋಣ ಎಂದು ಹೇಳಿದ್ದು, ಆತನ ಮಾತು ನಂಬಿದ ಯುವತಿ ಸುಮ್ಮನಾಗಿದ್ದಾಳೆ. ಬಳಿಕ ಆರೋಪಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿ ಪರಾರಿಯಾಗಿದ್ದಾನೆ. ನಂತರ ರಸ್ತೆಗೆ ಬಂದ ಯುವತಿ ದಾರಿಹೋಕರ ನೆರವು ಪಡೆದು ಮನೆಗೆ ತೆರಳಿದ್ದಾಳೆ. ಆಟೋ ನಂಬರ್ ಸಹಿತ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...