alex Certify ಶಾಕಿಂಗ್: ಯುವತಿಗೆ ಡ್ರಾಪ್ ಕೊಡುವುದಾಗಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಕಿಂಗ್: ಯುವತಿಗೆ ಡ್ರಾಪ್ ಕೊಡುವುದಾಗಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ

ಹುಬ್ಬಳ್ಳಿ: ಡ್ರಾಪ್ ಕೊಡುವುದಾಗಿ ಕರೆದೊಯ್ದು ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಹುಬ್ಬಳ್ಳಿ ತಾಲೂಕಿನ ಮಾವನೂರ ಗ್ರಾಮದ ಮಲ್ಲಿಕಾರ್ಜುನ ಬಗಡಗೇರಿ ಆರೋಪಿಯಾಗಿದ್ದು, ಆತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

19 ವರ್ಷದ ಯುವತಿ ನವೆಂಬರ್ 30 ರಂದು ಮಾವನೂರ ಗ್ರಾಮಕ್ಕೆ ಹೋಗಲು ಹುಬ್ಬಳ್ಳಿಯ ಬಾಸೆಲ್ ಮಿಷನ್ ಚರ್ಚ್ ಬಳಿ ನಿಂತಿದ್ದ ಸಂದರ್ಭದಲ್ಲಿ ಬೈಕ್ನಲ್ಲಿ ಆಗಮಿಸಿದ ಮಲ್ಲಿಕಾರ್ಜುನ ಹಾಗೂ ಆತನ ಸ್ನೇಹಿತ ಡ್ರಾಪ್ ಕೊಡುವುದಾಗಿ ಕರೆದುಕೊಂಡು ಹೋಗಿದ್ದಾರೆ.

ಅವರು ಬೇರೆ ರಸ್ತೆಗೆ ಕರೆದುಕೊಂಡು ಹೋಗುತ್ತಿದ್ದಂತೆ ಯುವತಿ ಆಕ್ಷೇಪಿಸಿದ್ದಾಳೆ. ಈ ವೇಳೆ ಮತ್ತೊಂದು ಬೈಕ್ ತರುವುದಾಗಿ ಮಲ್ಲಿಕಾರ್ಜುನನ ಸ್ನೇಹಿತ ಹೇಳಿ ಹೋಗಿದ್ದಾನೆ. ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದ ಮಲ್ಲಿಕಾರ್ಜುನ ಅತ್ಯಾಚಾರ ಎಸಗಿದ್ದಾನೆ. ನಂತರ ಆಕೆಯನ್ನು ಬೈಕ್ ನಲ್ಲಿ ವಾಪಸ್ ಕರೆದುಕೊಂಡು ಬರುವಾಗ ಅಪಘಾತವಾಗಿದೆ. ಬೈಕ್ ನಿಂದ ಆಯತಪ್ಪಿದ ಯುವತಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು, ನಂತರದಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. ಹಳೆ ಹುಬ್ಬಳ್ಳಿ ಠಾಣೆಗೆ ದೂರು ನೀಡಲಾಗಿದ್ದು ಬಳಿಕ ಗ್ರಾಮಾಂತರ ಠಾಣೆಗೆ ವರ್ಗಾಯಿಸಲಾಗಿದೆ. ಉತ್ತರ ಪೊಲೀಸ್ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...