alex Certify ಜಮೀನು ಕೆಲಸಕ್ಕೆ ತೆರಳಿದ್ದ ವೇಳೆ ಅತ್ಯಾಚಾರ, ಕೊಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜಮೀನು ಕೆಲಸಕ್ಕೆ ತೆರಳಿದ್ದ ವೇಳೆ ಅತ್ಯಾಚಾರ, ಕೊಲೆ

ಯಾದಗಿರಿ: ಜಮೀನಿನ ಕೆಲಸಕ್ಕೆ ತೆರಳಿದ ವೇಳೆ ಯುವತಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಘಟನೆ ನಡೆದಿದೆ. ದುಷ್ಕರ್ಮಿಗಳಿಂದ ಚಾಕು ಇರಿತಕ್ಕೆ ಒಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ಕಲಬುರಗಿ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದ್ದಾರೆ.

ಮುದ್ನಾಳ್ ದೊಡ್ಡ ತಾಂಡಾ ನಿವಾಸಿಯಾಗಿರುವ 35 ವರ್ಷದ ಯುವತಿ ಶನಿವಾರ ಜಮೀನಿನ ಕೆಲಸಕ್ಕೆ ತೆರಳಿದ್ದ ಸಂದರ್ಭದಲ್ಲಿ ಅತ್ಯಾಚಾರ ಎಸೆಗಿ ಕುತ್ತಿಗೆ ಮತ್ತು ಕಿವಿಗೆ ಚಾಕುವಿನಿಂದ ಇರಿಯಲಾಗಿದೆ. ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ಆಕೆಯನ್ನು ಸ್ಥಳೀಯರು ಕಲಬುರಗಿ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ತಂದೆ, ತಾಯಿ ಇಲ್ಲದ ಯುವತಿಗೆ ವಿಕಲಚೇತನ ಸಹೋದರ ಇದ್ದಾರೆ. ಐದಾರು ದಿನಗಳ ಹಿಂದೆಯಷ್ಟೇ ಆಕೆಗೆ ಮದುವೆ ನಿಶ್ಚಯವಾಗಿತ್ತು. ತಾಂಡಾ ಜನರೇ ಕೃತ್ಯ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, ಯಾದಗಿರಿ ಗ್ರಾಮೀಣ ಠಾಣೆ ಪೋಲೀಸರು ತನಿಖೆ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...