alex Certify ಅತ್ಯಾಚಾರ ಆರೋಪಿಗಳನ್ನು ಎನ್ ಕೌಂಟರ್ ಮಾಡಿ; ಪೊಲೀಸರು ದಿಟ್ಟತನ ತೋರಿಸಿ; ಶಾಸಕ ಸಾ.ರಾ. ಮಹೇಶ್ ಆಗ್ರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅತ್ಯಾಚಾರ ಆರೋಪಿಗಳನ್ನು ಎನ್ ಕೌಂಟರ್ ಮಾಡಿ; ಪೊಲೀಸರು ದಿಟ್ಟತನ ತೋರಿಸಿ; ಶಾಸಕ ಸಾ.ರಾ. ಮಹೇಶ್ ಆಗ್ರಹ

ಮೈಸೂರು: ಮೈಸೂರಿನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ಸಾ.ರಾ. ಮಹೇಶ್, ಆರೋಪಿಗಳನ್ನು ಎನ್ ಕೌಂಟರ್ ಮಾಡಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕರು, ಅತ್ಯಾಚಾರದಂತಹ ಪ್ರಕರಣ ನಡೆದಾಗ ಆರೋಪಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು. ಆಗ ಮಾತ್ರ ಮತ್ತೆ ಅಂತಹ ನೀಚ ಘಟನೆಗಳು ಮರುಕಳಿಸಲ್ಲ, ಆರೋಪಿಗಳಲ್ಲಿ ಭಯ ಹುಟ್ಟಿಸುತ್ತದೆ. ಇಂಥ ಘಟನೆ ನಡೆದಾಗ ಆರೋಪಿಗಳನ್ನು ಎನ್ ಕೌಂಟರ್ ಮಾಡುವ ದಿಟ್ಟತನವನ್ನು ಪೊಲೀಸರು ತೋರಿಸಬೇಕು ಎಂದರು.

ಯುವಕರ ಮನಗೆದ್ದ ‘ಮನ್ ಕಿ ಬಾತ್’, ಕ್ರೀಡೆ, ಕೌಶಲ್ಯದತ್ತ ಹೆಚ್ಚಿದ ಆಸಕ್ತಿ: ಮೋದಿ ಮಾಹಿತಿ

ಕಾನೂನಿನಲ್ಲಿ ತೊಡಕಿದೆ ಎಂಬ ಅರಿವು ನನಗೂ ಇದೆ. ಆರೋಪಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವ ಬಗ್ಗೆ ಪೊಲೀಸರಿಗೆ ಸರ್ಕಾರ ನಿರ್ದೇಶನ ನೀಡಬೇಕು ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...