alex Certify ರಾಷ್ಟ್ರಪತ್ನಿ ಹೇಳಿಕೆ ವಿವಾದ: ರಾಷ್ಟ್ರಪತಿ ದ್ರೌಪದಿ ಮುರ್ಮು ಕ್ಷಮೆಯಾಚಿಸಿದ ಕಾಂಗ್ರೆಸ್ ನಾಯಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಷ್ಟ್ರಪತ್ನಿ ಹೇಳಿಕೆ ವಿವಾದ: ರಾಷ್ಟ್ರಪತಿ ದ್ರೌಪದಿ ಮುರ್ಮು ಕ್ಷಮೆಯಾಚಿಸಿದ ಕಾಂಗ್ರೆಸ್ ನಾಯಕ

ನವದೆಹಲಿ: ರಾಷ್ಟ್ರಪತ್ನಿ ಹೇಳಿಕೆ ವಿವಾದಕ್ಕೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕ ಅಧೀರ್ ರಂಜನ್ ಚೌಧರಿ ಅವರು ಪತ್ರ ಬರೆದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಕ್ಷಮೆಯಾಚಿಸಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ರಾಷ್ಟ್ರಪತ್ನಿ ಹೇಳಿಕೆ ಕುರಿತಾಗಿ ಲಿಖಿತವಾಗಿ ಕ್ಷಮೆಯಾಚಿಸುವ ಮೂಲಕ ಅಧೀರ್ ರಂಜನ್ ಚೌಧರಿ ತಮ್ಮ ಪುನರಾವರ್ತಿತ ಸ್ಕ್ರಿಪ್ಟ್‌ ಗೆ ಅಂಟಿಕೊಂಡಿದ್ದಾರೆ. ಕ್ಷಮಾಪಣೆ ಪತ್ರದಲ್ಲಿ ಪದದ ಉಚ್ಛಾರಣೆ ನಾಲಿಗೆಯ ಸ್ಲಿಪ್ ಆಗಿದೆ. ರಾಷ್ಟ್ರಪತಿ ಎಂದು ಹೇಳುವಾಗ “ತಪ್ಪಾದ ಪದ” ಬಳಸಿದ್ದಕ್ಕಾಗಿ ಅವರು ವಿಷಾದಿಸಿದ್ದಾರೆ.

ತಪ್ಪು ಪದ ಬಳಸಿದ್ದಕ್ಕಾಗಿ ವಿಷಾದ ವ್ಯಕ್ತಪಡಿಸಲು ನಾನು ಪತ್ರ ಬರೆಯುತ್ತಿದ್ದೇನೆ. ನಾನು ಕ್ಷಮೆಯಾಚಿಸುತ್ತೇನೆ ಎಂದು ಅವರು ಬರೆದಿದ್ದಾರೆ. ಪತ್ರದಲ್ಲಿಯೂ ಅವರು ನಾಲಿಗೆಯ ಸ್ಲಿಪ್ ಆಗಿ ರಾಷ್ಟ್ರಪತಿಯನ್ನು ರಾಷ್ಟ್ರಪತ್ನಿ ಎಂದು ಉಲ್ಲೇಖಿಸಿರುವುದನ್ನು ಸಮರ್ಥಿಸಿಕೊಂಡಿದ್ದಾರೆ. ಆದರೆ, ಅವರು ಉದ್ದೇಶಪೂರ್ವಕವಾಗಿ ಮುರ್ಮು ಅವರನ್ನು ಅವಮಾನಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...