alex Certify ಬಿಪಿಎಲ್ ಕಾರ್ಡ್ ದಾರರಿಗೆ ಶಾಕ್: ಪಡಿತರ ಪಡೆಯದವರ ರೇಷನ್ ಕಾರ್ಡ್ ಜೊತೆ ಸೌಲಭ್ಯವೂ ಕಡಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಪಿಎಲ್ ಕಾರ್ಡ್ ದಾರರಿಗೆ ಶಾಕ್: ಪಡಿತರ ಪಡೆಯದವರ ರೇಷನ್ ಕಾರ್ಡ್ ಜೊತೆ ಸೌಲಭ್ಯವೂ ಕಡಿತ

ಬೆಂಗಳೂರು: ಆರು ತಿಂಗಳಿಂದ ಪಡಿತರ ಪಡೆಯದ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲು ಸರ್ಕಾರ ಕ್ರಮ ಕೈಗೊಂಡಿದ್ದು, ಇದರಿಂದ ಪಡಿತರ ಚೀಟಿ ಜೊತೆಗೆ ಸೌಲಭ್ಯವೂ ಕಡಿತವಾಗುವ ಆತಂಕದಲ್ಲಿ ಲಕ್ಷಾಂತರ ಕುಟುಂಬಗಳಿವೆ.

ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಗರಿಬ್ ಕಲ್ಯಾಣ ಅನ್ನ ಯೋಜನೆಯಡಿ ಪಡಿತರ ಪಡೆದುಕೊಳ್ಳದ ಬಿಪಿಎಲ್ ಕಾರ್ಡ್ ರದ್ದು ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ. ರಾಜ್ಯದಲ್ಲಿ 1,16,95,029 ಬಿಪಿಎಲ್ ಕಾರ್ಡ್ ದಾರರಿದ್ದಾರೆ. ಆರು ತಿಂಗಳಿನಿಂದ 3.26 ಲಕ್ಷ ಕಾರ್ಡ್ ದಾರರು ಪಡಿತರ ಪಡೆದುಕೊಂಡಿಲ್ಲ. ಇಂತಹ ಕಾರ್ಡ್ ಗಳನ್ನು ರದ್ದು ಮಾಡಲು ಸರ್ಕಾರ ಸೂಚನೆ ನೀಡಿದೆ. ಪಡಿತರ ಪಡೆಯದ ಕಾರ್ಡ್ ದಾರರಿಗೆ ಯಾವುದೇ ನೋಟಿಸ್ ನೀಡದೆ ಕಾರ್ಡ್ ಗಳನ್ನು ರದ್ದು ಮಾಡಲಾಗುವುದು ಎನ್ನಲಾಗಿದೆ.

ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರು ಚಿಕಿತ್ಸೆ ಪಡೆಯಲು, ಪಿಂಚಣಿ ಸೌಲಭ್ಯ, ಆರ್‌ಟಿಇ ಶಿಕ್ಷಣ ಮೊದಲಾದ ಸೌಲಭ್ಯಗಳನ್ನು ಪಡೆಯಲು ಬಿಪಿಎಲ್ ಕಾರ್ಡ್ ನಿಂದ ಅನುಕೂಲವಾಗಿದೆ. ಕಾರಣಾಂತರದಿಂದ ಕೆಲವರು ಪಡಿತರ ಪಡೆದುಕೊಳ್ಳುತ್ತಿಲ್ಲ. ಇದರಿಂದ ಸರ್ಕಾರಕ್ಕೆ ವಾರ್ಷಿಕ ಸುಮಾರು 60 ಕೋಟಿ ರೂ. ಉಳಿತಾಯವಾಗುತ್ತದೆ. ಹೀಗಿದ್ದರೂ ಪಡಿತರ ಪಡೆಯದವರ ಕಾರ್ಡ್ ರದ್ದು ಮಾಡುವುದರಿಂದ ಲಕ್ಷಾಂತರ ಕುಟುಂಬಗಳಿಗೆ ಅನ್ಯಾಯವಾಗುತ್ತದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...